ಮುಂಗಾರು ಪೂರ್ವ ಸಿದ್ಧತೆ ಕಾರ್ಯಕ್ರಮ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ವಿಕಸಿತ ಕೃಷಿ ಸಂಕಲ್ಪ ಅಭಿಯಾನ-2025ರ ಅಡಿಯಲ್ಲಿ ಮುಂಗಾರು ಪೂರ್ವ ಸಿದ್ಧತೆ ಕಾರ್ಯಕ್ರಮವನ್ನು ಕೇಂದ್ರ ಸರಕಾರದ ಕೃಷಿ ಹಾಗೂ ರೈತರ ಕಲ್ಯಾಣ ಸಚಿವಾಲಯವು ದೇಶಾದ್ಯಾಂತ ಹಮ್ಮಿಕೊಳ್ಳುತ್ತಿದೆ. ಕೃಷಿ ವಿಜ್ಞಾನ ಕೇಂದ್ರಗಳ ಕೃಷಿ ವಿಶ್ವ ವಿದ್ಯಾಲಯ, ಐ.ಸಿ.ಎ.ಆರ್ ಸಂಸ್ಥೆಗಳು, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಇಫ್ಕೊ, ಅಧಿಕಾರಿಗಳ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು. ಇಲಾಖೆಯ ಅಧಿಕಾರಿಗಳು, ವಿಜ್ಞಾನಿಗಳು, ಸಂಘ ಸಂಸ್ಥೆಗಳು, ಸಮೂಹ ರೈತರ ಬಳಿಗೆ ಬಂದು ಕೃಷಿ ಬಗ್ಗೆ ಮಾಹಿತಿಯನ್ನು ನೀಡಲಾಗುವುದು.

Advertisement

ಈ ಅಭಿಯಾನದಲ್ಲಿ 1500-2000 ತಂಡಗಳ ಮೂಲಕ ದೇಶದ 700 ಜಿಲ್ಲೆಗಳಲ್ಲಿನ ಸುಮಾರು 1.5ರಿಂದ 2.00 ಕೋಟಿ ರೈತರೊಂದಿಗೆ ನೇರ ಸಂವಾದ ನಡೆಸಲಾಗುವುದು. ಕೃಷಿಗೆ ಸಂಬಂಧಿಸಿದ ವಿನೂತನ ತಾಂತ್ರಿಕತೆಗಳು, ಹೊಸ ಬೀಜಗಳ ಮಾಹಿತಿ ಜೊತೆಗೆ ಸರಕಾರದ ಯೋಜನೆಗಳ ಕುರಿತು ಕೂಡ ಮಾಹಿತಿ ನೀಡಲಾಗುವುದು. ಜೊತೆಗೆ ಈ ಅಭಿಯಾನದಲ್ಲಿ ರೈತರು ನೀಡುವ ಪ್ರಕ್ರಿಯೆಗಳನ್ನು ಸಂಗ್ರಹಿಸಿ ಅವರ ಹೊಸ ಆವಿಷ್ಕಾರಗಳನ್ನು ಸಂಶೋಧನೆ ಮತ್ತು ಪ್ರಸಾರ ಚಟುವಟಿಕೆಗಳಲ್ಲಿ ಬಳಸಲಾಗುವುದು.

ಈ ಹಿನ್ನೆಲೆಯಲ್ಲಿ 2025ರ ಮುಂಗಾರು ಹಂಗಾಮಿನಲ್ಲಿ ಐ.ಸಿ.ಎ.ಆರ್-ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಹುಲಕೋಟಿಯು ಮುಂಗಾರು ಪೂರ್ವ ಸಿದ್ಧತೆ ಅಭಿಯಾನವನ್ನು ಮೇ. 16ರಿಂದ ಜೂನ್ 2ರವರೆಗೆ ಕೃಷಿ ಇಲಾಖೆ, ಇಫ್ಕೊ ಸಂಸ್ಥೆ, ತೋಟಗಾರಿಕೆ ಇಲಾಖೆ ಹಾಗೂ ಪಶುಸಂಗೋಪನೆ ಇಲಾಖೆ ರೈತ ಸಂಘಟನೆಗಳ ಸಹಯೋಗದಲ್ಲಿ ಗದಗ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುವುದು. ಕೃಷಿಗೆ ಸಂಬಂಧಪಟ್ಟ ವಿನೂತನ ತಾಂತ್ರಿಕತೆಗಳು, ಮಣ್ಣು ಪರೀಕ್ಷೆ, ಬೀಜೋಪಚಾರದ ಪ್ರಾತ್ಯಕ್ಷಿಕೆ, ಸಿರಿಧಾನ್ಯ ಬೆಳೆ ಹಾಗೂ ಅವುಗಳ ಪೌಷ್ಠಿಕತೆ, ಕೃಷಿ ಭಾಗ್ಯ, ಇಲಾಖೆಗಳ ಯೋಜನೆಗಳು, ಸಮಗ್ರ ಕೃಷಿ ಪದ್ಧತಿ, ಡ್ರೋನ್ ಪ್ರಾತ್ಯಕ್ಷಿಕೆ ಮತ್ತು ರೈತರ ಆವಿಷ್ಕಾರಗಳಿಗೆ ಹೆಚ್ಚು ಆದ್ಯತೆ ಕೊಟ್ಟು ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು.

ಈ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆ ಅಭಿಯಾನದ ತಂಡವು ತಮ್ಮ ಗ್ರಾಮಕ್ಕೆ ಬಂದಾಗ ರೈತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಾಹಿತಿಯನ್ನು ತಿಳಿದುಕೊಂಡು ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಪ್ರಕಟಣೆ ತಿಳಿಸಿದೆ.

ದೇಶದ ಎಲ್ಲ ಗ್ರಾಮಗಳನ್ನು ಈ ಯೋಜನೆ ಅಡಿಯಲ್ಲಿ ಸಂಪರ್ಕಿಸಿ ಮಾಹಿತಿ ನೀಡಲಾಗುವುದು. ಪ್ರಮುಖವಾಗಿ ಕೃಷಿಯಲ್ಲಿ ವಿನೂತನ ತಂತ್ರಜ್ಞಾನಗಳು, ಹೊಸ ತಳಿಗಳು, ಬೀಜೋಪಚಾರ, ಮಣ್ಣು ಆಧಾರಿತ ಕೃಷಿ ಬೆಳೆಗಳು, ಕೃಷಿ ಭಾಗ್ಯ ಯೋಜನೆ, ಸಮಗ್ರ ಬೇಸಾಯ ಪದ್ಧತಿ, ಸರಕಾರದ ವಿವಿಧ ಯೋಜನೆಗಳು ಹಾಗೂ ಕೃಷಿಯಲ್ಲಿ ಹೆಚ್ಚಿನ ಲಾಭವನ್ನು ಹೇಗೆ ಪಡಯಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುವುದು.


Spread the love

LEAVE A REPLY

Please enter your comment!
Please enter your name here