ಯಾವುದೇ ಸಮಸ್ಯೆಯಾಗದಂತೆ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ: ಬಿ ದಯಾನಂದ್

0
Spread the love

ಬೆಂಗಳೂರು: ಯಾವುದೇ ಸಮಸ್ಯೆಯಾಗದಂತೆ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದುಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ​ ದಯಾನಂದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಜನವರಿ 26ರ ಗಣರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ.

Advertisement

ರಾಜ್ಯಪಾಲರು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. 1051 ಪೊಲೀಸ್ ಅಧಿಕಾರಿಗಳು ಭದ್ರತೆಗೆ ನಿಯೋಜಿಸಲಾಗುತ್ತದೆ. ವಿವಿಧ ಬಣ್ಣದ ಪಾಸ್‌ಗಳ ಮೂಲಕ ಪ್ರವೇಶ ವ್ಯವಸ್ಥೆ ಮಾಡಲಾಗಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಕಲರ್ ಕೋಡ್​ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ, ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ ಎಂದರು.


Spread the love

LEAVE A REPLY

Please enter your comment!
Please enter your name here