ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಸಿಎಂ ಸಿದ್ದರಾಮಯ್ಯ ಹೂಗುಚ್ಛ ನೀಡಿ ಸ್ವಾಗತ ಮಾಡಿದ್ದಾರೆ. ಈ ವೇಳೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ,
Advertisement
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು. HAL ವಿಮಾನ ನಿಲ್ದಾಣದಿಂದ ನೇರವಾಗಿ ನಿಮ್ಹಾನ್ಸ್ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ವಿವಿಧ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಇನ್ನೂ ನಿಮ್ಹಾನ್ಸ್ ಕಾರ್ಯಕ್ರಮ ಮುಗಿಸಿ HAL ಏರ್ಪೋರ್ಟ್ಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 2-20ಕ್ಕೆ HAL ಏರ್ಪೋರ್ಟ್ ನಿಂದ ಬೆಳಗಾವಿಗೆ ತೆರಳಲಿದ್ದಾರೆ. ಮದ್ಯಾಹ್ನ 3-55ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ವಿಮಾನ ನಿಲ್ದಾಣದಂದ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.