ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆಗಟ್ಟಿ

0
Spread the love

ವಿಜಯಸಾಕ್ಷಿ ಸುದ್ದಿ, ರೋಣ: ರಾಜ್ಯಾದ್ಯಂತ ಹಿರಿಯ ನಾಗರಿಕರ ಮೆಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ಮೂಲಕ ಸ್ವಸ್ಥ ಸಮಾಜವನ್ನು ನಿರ್ಮಿಸಬೇಕು ಎಂದು ಆಗ್ರಹಿಸಿ ಸೋಮವಾರ ರೋಣ ತಾಲೂಕಾ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ತಹಸೀಲ್ದಾರ ನಾಗರಾಜ ಕೆ ಅವರಿಗೆ ಮನವಿ ಸಲ್ಲಿಸಿದರು.

Advertisement

ಪ್ರತಿ ವರ್ಷ ಜು. 15ರಂದು ಹಿರಿಯ ನಾಗರಿಕರ ದೌರ್ಜನ್ಯ ತಡೆ ದಿನಾಚರಣೆ ಎಂದು ಘೋಷಿಸಿ ನಾಗರಿಕ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಬೇಕು ಎನ್ನುವ ವಿಚಾರ ಕೇವಲ ದಾಖಲೆಗಳಲ್ಲಿ ಮಾತ್ರ ಅಡಕವಾಗಿದ್ದು, ಇದುವರೆಗೂ ಜಾರಿಗೆ ತಂದಿಲ್ಲ. ಸರಕಾರ ಮತ್ತು ಅಧಿಕಾರಿಗಳು ಕೂಡಲೇ ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಹಿರಿಯ ನಾಗರಿಕರಲ್ಲಿ ಭದ್ರತೆಯನ್ನು ಮೂಡಿಸಬೇಕು ಎಂದು ಆಗ್ರಹಿಸಿದರು.

ಅಧ್ಯಕ್ಷ ಎ.ಎಸ್. ಖತೀಬ, ಎಸ್.ಎಫ್. ಹಂಚಿನಾಳ, ಬಿ.ಎಚ್. ನಾಯಕ, ಕೆ.ಎಸ್. ಬಾರಕೇರ, ಬಿ.ಪಿ. ಅತ್ತಿಗೇರಿ, ಎಮ್.ಎಸ್. ಹಾದಿಮನಿ, ಎಸ್.ಪಿ. ರಾಟಿಮನಿ, ಎಸ್.ಪಿ. ಹುನಗುಂಡಿ ಸೇರಿದಂತೆ ನಿವೃತ್ತ ನೌಕರರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here