HomeIndia Newsದೇಶದ ಜನತೆಗೆ ವಿಜಯದಶಮಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ದೇಶದ ಜನತೆಗೆ ವಿಜಯದಶಮಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

For Dai;y Updates Join Our whatsapp Group

Spread the love

ನವದೆಹಲಿ:– ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ವಿಜಯದಶಮಿ ಹಬ್ಬದ ಶುಭಾಶಯ ಕೋರಿದ್ದಾರೆ.

ಈ ಸಂಬಂಧ X ಮಾಡಿರುವ ಅವರು, ವಿಜಯ ದಶಮಿ ಎಂಬುದು ದುಷ್ಟತನ ಹಾಗೂ ಸುಳ್ಳಿನ ಮೇಲೆ ಒಳ್ಳೆಯದು ಹಾಗೂ ಸತ್ಯದ ವಿಜಯವನ್ನು ಸಂಕೇತಿಸುತ್ತದೆ. ಈ ಶುಭ ಸಂದರ್ಭವು ಧೈರ್ಯ, ಬುದ್ಧಿವಂತಿಕೆ ಹಾಗೂ ಭಕ್ತಿಯ ಹಾದಿಯಲ್ಲಿ ನಡೆಯಲು ಎಲ್ಲರಿಗೂ ಸ್ಫೂರ್ತಿ ನೀಡಲಿ, ಎಲ್ಲರಿಗೂ ವಿಜಯದಶಮಿಯ ಶುಭಾಶಯಗಳು ಎಂದು ಬರೆದಿದ್ದಾರೆ.

ಇಂದು ಗಾಂಧಿ ಜಯಂತಿಯನ್ನು ದೇಶಾದ್ಯಂತ ಆಚರಿಸಲಾಗುತ್ತಿದ್ದು, ಪ್ರಧಾನಿ ಮೋದಿ ಮಹಾತ್ಮ ಗಾಂಧಿಯನ್ನು ಈ ಸಂದರ್ಭದಲ್ಲಿ ಸ್ಮರಿಸಿದ್ದಾರೆ. ಧೈರ್ಯ ಹಾಗೂ ಸರಳತೆ ದೇಶದ ದೊಡ್ಡ ಬದಲಾವಣೆಗೆ ಹೇಗೆ ಸಾಧನವಾಗಬಹುದು ಎಂಬುದು ಗಾಂಧೀಜಿಯವರನ್ನು ನೋಡಿಯೇ ಕಲಿಯಬೇಕು. ಸೇವೆ, ಕರುಣೆ, ಅಹಿಂಸೆಯೇ ಜನರನ್ನು ಸಬಲೀಕರಣಗೊಳಿಸಲು ಅಗತ್ಯ ಸಾಧನವೆಂದು ಅವರು ನಂಬಿದ್ದರು. ವಿಕಸಿತ ಭಾರತ ನಿರ್ಮಿಸಲು ಅವರ ಮಾರ್ಗವನ್ನೇ ಅನುಸರಿಸುತ್ತೇವೆ ಎಂದು ಬರೆದಿದ್ದಾರೆ. ಇಂದು ಲಾಲ್​ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಕೂಡ, ಅವರ ಬಗ್ಗೆಯೂ ಪ್ರಧಾನಿ ಮೋದಿ ಪೋಸ್ಟ್​ ಮಾಡಿದ್ದಾರೆ.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅಸಾಧಾರಣ ರಾಜಕಾರಣಿಯಾಗಿದ್ದು, ಅವರ ಸಮಗ್ರತೆ, ನಮ್ರತೆ ಮತ್ತು ದೃಢಸಂಕಲ್ಪವು ಸವಾಲಿನ ಸಮಯದಲ್ಲೂ ಭಾರತವನ್ನು ಬಲಪಡಿಸಿತು. ಅವರು ಅನುಕರಣೀಯ ನಾಯಕತ್ವ, ಶಕ್ತಿ ಮತ್ತು ನಿರ್ಣಾಯಕ ಕ್ರಿಯೆಯ ವ್ಯಕ್ತಿತ್ವವನ್ನು ಹೊಂದಿದ್ದರು. ‘ಜೈ ಜವಾನ್ ಜೈ ಕಿಸಾನ್’ ಎಂಬ ಅವರ ಸ್ಪಷ್ಟ ಕರೆ ನಮ್ಮ ಜನರಲ್ಲಿ ದೇಶಭಕ್ತಿಯ ಮನೋಭಾವವನ್ನು ಹುಟ್ಟುಹಾಕಿತು. ಬಲಿಷ್ಠ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸುವ ಪ್ರಯತ್ನದಲ್ಲಿ ಅವರು ನಮ್ಮನ್ನು ಪ್ರೇರೇಪಿಸುತ್ತಲೇ ಇದ್ದಾರೆ ಎಂದು ಬರೆದಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!