HomeKarnataka Newsಈ ಬಜೆಟ್‌ʼನಲ್ಲಿ ಯಾವ ಕ್ಷೇತ್ರಕ್ಕೆ ಆದ್ಯತೆ ಕೊಡಬೇಕಿತ್ತೋ ಅದಕ್ಕೆ ಕೊಟ್ಟಿಲ್ಲ: ಜಗದೀಶ್‌ ಶೆಟ್ಟರ್‌

ಈ ಬಜೆಟ್‌ʼನಲ್ಲಿ ಯಾವ ಕ್ಷೇತ್ರಕ್ಕೆ ಆದ್ಯತೆ ಕೊಡಬೇಕಿತ್ತೋ ಅದಕ್ಕೆ ಕೊಟ್ಟಿಲ್ಲ: ಜಗದೀಶ್‌ ಶೆಟ್ಟರ್‌

For Dai;y Updates Join Our whatsapp Group

Spread the love

ಹುಬ್ಬಳ್ಳಿ: ಈ ಬಜೆಟ್‌ನಲ್ಲಿ ಯಾವ ಕ್ಷೇತ್ರಕ್ಕೆ ಆದ್ಯತೆ ಕೊಡಬೇಕಿತ್ತೋ ಅದಕ್ಕೆ ಕೊಟ್ಟಿಲ್ಲ ಎಂದು ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದ ಅದರಲ್ಲೂ ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗೆ ಈ ಬಾರಿಯ ಬಜೆಟ್‌ನಲ್ಲಿ ಒತ್ತು ಕೊಡಬೇಕಿತ್ತು.

ಆದರೆ ಕೃಷ್ಣಾ ಮೇಲ್ದಂಡೆ ಯೋಜನೆಗೆ ಯಾವುದೇ ಆದ್ಯತೆ ಕೊಟ್ಟಿಲ್ಲ. ರಾಜ್ಯದ ಅಭಿವೃದ್ಧಿಯನ್ನೂ ಈ ಬಾರಿಯ ಬಜೆಟ್‌ನಲ್ಲಿ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಕಿಡಿಕಾರಿದ್ದಾರೆ.

ಸಾಲ ಮಾಡುವುದೇ ಸಿದ್ದರಾಮಯ್ಯನವರ ಮೂಲ ಉದ್ದೇಶವಾಗಿದೆ. ಬರೋಬ್ಬರಿ 7.50 ಲಕ್ಷ ಕೋಟಿ ರೂ.ನಷ್ಟು ಅಗಾಧ ಮೊತ್ತದ ಸಾಲದ ಹೊರೆಯನ್ನು ರಾಜ್ಯದ‌ ಜನರ ಮೇಲೆ ಹೇರಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ ಅಯೋಮಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆರ್ಥಿಕ‌ ಆಡಳಿತ ವ್ಯವಸ್ಥೆಯಲ್ಲಿ‌ ಸಿದ್ಧರಾಮಯ್ಯ ಸಂಪೂರ್ಣ ವಿಫಲರಾಗಿದ್ದಾರೆ. ಅಲ್ಪಸಂಖ್ಯಾತರ ಅದರಲ್ಲೂ ಮುಸ್ಲಿಮರ ತುಷ್ಠೀಕರಣವನ್ನು ಮುಂದುವರೆಸಿದ್ದಾರೆ. ಇದು‌ ಮುಸ್ಲಿಮರ ಪರವಾಗಿರುವ ಬಜೆಟ್ ಆಗಿದೆಯೇ ಹೊರತು, ರಾಜ್ಯದ ಸಮಸ್ತ ಜನರ ಪರವಾಗಿರುವ ಬಜೆಟ್‌ ಅಲ್ಲ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!