ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್!

0
Spread the love

ಮಂಡ್ಯ:- ನಡುರಸ್ತೆಯಲ್ಲೇ ಖಾಸಗಿ ಬಸ್ ಒಂದು ಹೊತ್ತಿ ಉರಿದಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ‌ ಬಳಿ ಇಂದು ಬೆಳಗ್ಗಿನ ಜಾವ 5 ಗಂಟೆ ಸಮಯದಲ್ಲಿ ಜರುಗಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಸುಮಾರು 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ‌ ಬೆಂಗಳೂರು ಕಡೆಗೆ ಖಾಸಗಿ ಬಸ್ ಚಲಿಸುತ್ತಿತ್ತು. ಕದಬಹಳ್ಳಿ ಬಳಿ ಇದ್ದಕ್ಕಿದ್ದಂತೆ ಬಸ್‌ನಲ್ಲಿ‌ ಬೆಂಕಿ‌ ಕಾಣಿಸಿದೆ. ಕೂಡಲೇ ಬಸ್ ಚಾಲಕ ಬಸ್‌ನಲ್ಲಿ‌ ಇದ್ದ 25 ಮಂದಿ ಪ್ರಯಾಣಿಕರನ್ನು ತಮ್ಮ ಲೆಗೇಜ್‌ ಸಹಿತ ಕೆಳಗೆ‌ ಇಳಿಯಲು ಹೇಳಿದ್ದಾನೆ. ಬಳಿಕ‌ ಎಲ್ಲಾ ಪ್ರಯಾಣಿಕರು ಬಸ್‌ನಿಂದ ಕೆಳಗೆ ಇಳಿದಿದ್ದಾರೆ.

ಬಳಿಕ‌ ಬಸ್‌ನಲ್ಲಿ‌ ಬೆಂಕಿಯ ಪ್ರಮಾಣ ಹೆಚ್ಚಿದ್ದು, ನೋಡ‌ ನೋಡುತ್ತಿದ್ದಂತೆ ಬಸ್ ಧಗಧಗನೇ‌ ಹೊತ್ತಿ‌ ಉರಿದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಸ್‌ನ ಬೆಂಕಿಯನ್ನು ಹಾರಿಸಿದ್ದಾರೆ. ಸದ್ಯ ಬಸ್‌ನಲ್ಲಿ‌ ಹೇಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿಲ್ಲ.


Spread the love

LEAVE A REPLY

Please enter your comment!
Please enter your name here