ಚಿಕ್ಕಬಳ್ಳಾಪುರ:- ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಕಾರಿಗೆ ಖಾಸಗಿ ಬಸ್ವೊಂದು ಡಿಕ್ಕಿಯಾದ ಪರಿಣಾಮ ಕಾರು ಹೊತ್ತಿ ಉರಿದು ತಾಯಿ, ಮಗ ಸಜೀವದಹನವಾಗಿರುವ ಘಟನೆ ಜರುಗಿದೆ.
Advertisement
34 ವರ್ಷದ ಧನಂಜಯ್ ಹಾಗೂ 54 ವರ್ಷದ ಕಲಾವತಿ ಮೃತರು. ಇನ್ನೂ ಕಾರಿನಲ್ಲಿ 5 ಮಂದಿ ಪ್ರಯಾಣ ಮಾಡುತ್ತಿದ್ದು ಮೂರು ವರ್ಷದ ಮಾನ್ವಿತ ಹಾಗೂ ಶೋಭಾ ಸೇರಿದಂತೆ ಉಮಾದೇವಿ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಂತಾಮಣಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಬಸ್ ಸಹ ರಸ್ತೆ ಬದಿ ಹಳ್ಳದಲ್ಲಿ ಪಲ್ಟಿಯಾಗಿ ವಾಲಿ ನಿಂತಿದ್ದು ಬಸ್ ನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿವೆ. ಗಾಯಾಳುಗಳನ್ನ ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಕಾರಿನ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಕುಶಾಲ್ ಚೌಕ್ಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.