ಕುಸ್ತಿ ಪಂದ್ಯಾವಳಿಯಲ್ಲಿ ಬಹುಮಾನ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗಾಂಧಿನಗರ ಯುವಜನ ಸಂಘ ಸಾಗರ ಇವರು ಏರ್ಪಡಿಸಿದ್ದ 50ನೇ ವರ್ಷದ ದಸರಾ ಕುಸ್ತಿ ಪಂದ್ಯಾವಳಿಯಲ್ಲಿ ಮನೋರಮಾ ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿನಿ ಪ್ರಿಯಾಂಕಾ ಕರಿಗಾರ ಭಾಗವಹಿಸಿ ಪ್ರಥಮ ಸ್ಥಾನ ಹಾಗೂ 18 ಸಾವಿರ ರೂ ನಗದು ಬಹುಮಾನ ಪಡೆದುಕೊಂಡಿದ್ದಾಳೆ.

Advertisement

ಸಾಧನೆಗೈದ ವಿದ್ಯಾರ್ಥಿನಿಗೆ ಹಾಗೂ ಕಾಲೇಜಿನ ದೈಹಿಕ ನಿರ್ದೇಶಕ ಖಯೂಮ ನವಲೂರರಿಗೆ ಸಂಸ್ಥೆಯ ಚೈರ್ಮನ್ ಎನ್.ಎಮ್ ಕುಡಚರಕರ, ಪ್ರಾಚಾರ್ಯ ಬಿ.ಎಸ್. ಹಿರೇಮಠ, ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡಚರಕರ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ನಿರ್ದೇಶಕ ಸಂಜಯ ಕುಡಚರಕರ, ಚೇತನ ಕುಡಚರಕರ, ಸಂಯೋಜಕರುಗಳಾದ ಪ್ರೊ. ಸವಿತಾ ಪೂಜಾರ, ಪ್ರೊ. ಪ್ರಿಯಾಂಕಾ ಕಬಾಡಿ, ಪ್ರೊ. ಯಶವಂತ ಕಲಬುರ್ಗಿ, ಪ್ರೊ. ಶಾಹಿದಾ ಶಿರಹಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here