ಶ್ರೀ ಗವಿಸಿದ್ಧೇಶ್ವರ ಉತ್ಸವ ಮೂರ್ತಿಯ ಮೆರವಣಿಗೆ

0
Spread the love

ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಉತ್ಸವ ಮೂರ್ತಿಯ ಮೆರವಣಿಗೆಯು ಇಂದು ಸಾಯಂಕಾಲ 05.00 ಗಂಟೆಗೆ ಆರಂಭಗೊಂಡು ಸಂಜೆ ಶ್ರೀ ಗವಿಮಠತಲುಪಿತು. ಜಡೇಗೌಡರ ಮನೆಯಿಂದ ಪ್ರಾರಂಭಗೊಂಡು ಕೋಟೆ ಮಠದಿಂದ ಪಲ್ಲಕ್ಕಿ ಹೊರಟು ಗಡಿಯಾರ ಕಂಬ ವೃತ್ತದಲ್ಲಿ, ಮುದ್ದಾಬಳ್ಳಿಯಿಂದ ಬರುವ ಶ್ರೀ ಗವಿಸಿದ್ಧೇಶ್ವರ ಉತ್ಸವ ಮೂರ್ತಿಯೂ, ಹಲಗೇರಿ ಗ್ರಾಮದ ಸದ್ಭಕ್ತರಾದ ಲಿಂ.ಶ್ರೀ ವೀರನಗೌಡರು ಪಾಟೀಲ ಮತ್ತು ಧರ್ಮಪತ್ನಿ ಶ್ರೀಮತಿ ಗಿರಿಜಮ್ಮ ಪಾಟೀಲರ ಮನೆಯಿಂದ ಬರುವ ಕಳಸ ಹಾಗೂ ಮಂಗಳಾಪೂರದಿಂದ ಬರುವ ಶ್ರೀ ಗವಿಸಿದ್ಧೇಶ್ವರ ಉತ್ಸವ ಮೂರ್ತಿಯು ಜವಾಹರ್ ರಸ್ತೆಯಲ್ಲಿ ಕೂಡಿಕೊಂಡು ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್, ಕವಲೂರು ಓಣಿ, ಸಿದ್ಧೇಶ್ವರ ವೃತ್ತದ ಗವಿಶ್ರೀ ನಗರದ 3ನೇ ಮುಖ್ಯರಸ್ತೆ ಮೂಲಕ ಭವ್ಯ ಮೆರವಣಿಗೆ ಬಹಳ ಸಡಗರ, ಸಂಭ್ರಮದಿಂದ ಜರುಗಿತು.

Advertisement

ಇದರಲ್ಲಿ ನಂದಿಕೋಲು, ಡೊಳ್ಳು, ಭಜನೆ, ಭಾಜಾ-ಭಜಂತ್ರಿ, ಪಂಜು, ಇಲಾಲು ಹಾಗೂ ನಾಡಿನ ವೈಭವವನ್ನು ಬಿಂಬಿಸುವ ಅನೇಕ ಜಾನಪದ ವಿಶೇಷ ಕಲಾ ತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸಿ ಮೆರವಣಿಗೆಗೆ ಮೆರಗುತಂದವು. ಈ ಮೆರವಣಿಗೆಯಲ್ಲಿ ಸಹಸ್ರಾರು ಸದ್ಭಕ್ತರು ಹಾಗೂ ಗೌಡರ ಮನೆತನದವರು ಪಾಲ್ಗೊಂಡಿದ್ದರು.

ಮಾಧ್ಯಮ ಸಮಿತಿ

 


Spread the love

LEAVE A REPLY

Please enter your comment!
Please enter your name here