ಯುರೋಪ್ ರಾಷ್ಟ್ರಗಳಲ್ಲಿ ಪ್ರೊ. ಯಾಪಲಪರವಿ ಉಪನ್ಯಾಸ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಾಡಿನ ಹೆಸರಾಂತ ಸಾಹಿತಿ, ಬಸವತತ್ವ ಚಿಂತಕ ಹಾಗೂ ವಚನ ಟಿವಿಯ ಮುಖ್ಯಸ್ಥ ಪ್ರೊ. ಸಿದ್ದು ಯಾಪಲಪರವಿ ಅವರು ಮೇ 8ರಿಂದ ಇಪ್ಪತ್ತು ದಿನಗಳ ಕಾಲ ಇಂಗ್ಲೆಂಡ್, ಫ್ರಾನ್ಸ್, ಜರ್ಮನಿ, ಸ್ವಿಜರ್ಲ್ಯಾಂಡ್ ಹಾಗೂ ಇತರ ಎಂಟು ರಾಷ್ಟ್ರಗಳಲ್ಲಿ ಪ್ರವಾಸ ಮಾಡಲಿದ್ದರೆ.

Advertisement

ಬೆಂಗಳೂರಿನ ರಾಷ್ಟ್ರೀಯ ಬಸವ ಪ್ರತಿಷ್ಠಾನ, ಪರಮಪೂಜ್ಯ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಆಯೋಜಿಸಿರುವ ಚಿಂತನ ಗೋಷ್ಠಿಯಲ್ಲಿ ಪ್ರಧಾನ ಉಪನ್ಯಾಸಕರಾಗಿ ಪಾಲ್ಗೊಂಡು ‘ಜಗತ್ತಿನ ಮೊದಲ ಪಾರ್ಲಿಮೆಂಟ್ ಅನುಭವ ಮಂಟಪ ಹಾಗೂ ವಚನಗಳ ಜಾಗತಿಕ ಮೌಲ್ಯಗಳು’ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.

ಹಿರಿಯ ಸಾಂಸ್ಕೃತಿಕ ಚಿಂತಕರಾದ ಡಾ. ಜಿ.ಬಿ. ಪಾಟೀಲ, ಜಿಲ್ಲಾ ವಿಶ್ವಕರ್ಮ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜಗೋಪಾಲ ಕಡ್ಲಿಕೊಪ್ಪ, ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕಿರೆಸೂರ, ಡಾ. ಜಿ.ಎಸ್. ಹಿರೇಮಠ ಸೇರಿದಂತೆ ಕಸಾಪ ಪದಾಧಿಕಾರಿಗಳು ಹಾಗೂ ಸಾಹಿತ್ಯಾಸಕ್ತರು ಪ್ರೊ. ಸಿದ್ದು ಯಾಪಲಪರವಿ ಅವರನ್ನು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here