ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ವಿಚಾರ: ಸಿಎಂ ಪರ ಬ್ಯಾಟ್‌ ಬೀಸಿದ ಕೇಂದ್ರ ವಿ.ಸೋಮಣ್ಣ

0
Spread the love

ತುಮಕೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ಅತ್ತ ಸಿದ್ದರಾಮಯ್ಯ ಪರ ಸಚಿವರು ನಿಂತುಕೊಂಡಿದ್ದಾರೆ. ಇದರ ಬೆನ್ನಲ್ಲೇ ಸಿ ದ್ದರಾಮಯ್ಯ ಪರ ಸೋಮಣ್ಣ ಬ್ಯಾಟಿಂಗ್ ಮಾಡಿದ್ದಾರೆ. ಹೌದು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆದ್ರೆ ನನ್ನಷ್ಟು ಖುಷಿ ಪಡೋರು ಯಾರೂ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Advertisement

ಸಿದ್ದರಾಮಯ್ಯನವರು ನುರಿತ ರಾಜಕಾರಣಿಯಾಗಿದ್ದಾರೆ. ಕೆಲವು ಸಂದರ್ಭದಲ್ಲಿ ಕಾನೂನಿಗಿಂತ ಯಾರು ದೊಡ್ಡವರಲ್ಲ ಆದ್ದರಿಂದ ಕಾನೂನಿನ ಕೆಲಸ ಕಾನೂನು ಮಾಡುತ್ತೆ. ಇದರಿಂದ ಸಿದ್ದರಾಮಯ್ಯ ಸಾಹೆಬ್ರು ಸಹ ಅವರೇನು ಮಾಡ್ಬೇಕು ಅದನ್ನೇ ಮಾಡ್ತಾರೆ ಎಂದರು.ಇನ್ನೂ ನನಗೂ 45 ವರ್ಷಗಳ ರಾಜಕೀಯ ಅನುಭವ ಇದೆ. ಸಿದ್ದರಾಮಯ್ಯ ಅವರು ಬುದ್ಧಿವಂತರಿದ್ದಾರೆ.

ನಾನು ಅವರು ಬಹಳ ಆತ್ಮೀಯರಾಗಿ ಕೆಲಸ ಮಾಡಿದ್ದೇವೆ. ನಿನ್ನೆ ಕೂಡ ಅವರ ಜೊತೆ ಮಾತನಾಡಿದಾಗ, ಅವರು ಮಾತನಾಡಿದ್ದನ್ನು ನಾನು ಬಹಳ ಆನಂದದಿಂದ ಸ್ವೀಕಾರ ಮಾಡಿದ್ದೇನೆ. ಬಾಕಿದ್ದೆಲ್ಲಾ ಕಾನೂನು ನೋಡುತ್ತದೆ. ಕಾನೂನು ಏನು ಹೇಳುತ್ತದೆಯೋ ಅದು ಆಗುತ್ತದೆ” ಎಂದು ಕೆಂದ್ರ ಸಚಿವ ವಿ. ಸೋಮಣ್ಣ ತಿಳಿಸಿದರು.


Spread the love

LEAVE A REPLY

Please enter your comment!
Please enter your name here