ಪ್ರಾಸಿಕ್ಯೂಷನ್ ತೀರ್ಪು: ಸಿದ್ದರಾಮಯ್ಯ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ

0
Spread the love

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಲಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರ ವಹಿಸಿದ್ದಾರೆ.

Advertisement

 ಪ್ರಕರಣದ ಹಿನ್ನೆಲೆ

ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ.ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಹಾಗೂ ವಕೀಲ ಪ್ರದೀಪ್‌ ಕುಮಾರ್‌ ಅವರು ನೀಡಿದ್ದ ದೂರುಗಳನ್ನು ಆಧರಿಸಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಕಳೆದ ಆ.17ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಅದನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿರುವ ಸಿಎಂ,

‘ಧಿ’ರಾಜ್ಯಪಾಲರು ವಿವೇಚನೆ ಬಳಸದೆ, ಸಮರ್ಥ ಕಾರಣ ನೀಡದೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸಚಿವ ಸಂಪುಟದ ಸಲಹೆ ತಿರಸ್ಕರಿಸಿದ್ದಾರೆ. ದೂರುಗಳಲ್ಲಿಹುರುಳಿಲ್ಲದಿದ್ದರೂ ರಾಜಕೀಯ ಪ್ರೇರಿತವಾಗಿ ವರ್ತಿಸಿ ಅನುಮತಿ ನೀಡಿದ್ದಾರೆ. ಇದು ಚುನಾಯಿತ ಸರಕಾರವನ್ನು ಅಸ್ಥಿರಗೊಳಿಸುವ ಯತ್ನವಾಗಿದ್ದು, ಕಾನೂನು ಬಾಹಿರವಾದ ಅನುಮತಿ ರದ್ದುಗೊಳಿಸಬೇಕು,’ಧಿ’ ಎಂದು ನ್ಯಾಯಾಲಯವನ್ನು ಕೋರಿದ್ದಾರೆ.


Spread the love

LEAVE A REPLY

Please enter your comment!
Please enter your name here