ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಬಸವನಗದ್ದೆಯ ಪ್ರಸನ್ನ ಎಂಬುವರ ಮನೆಯಲ್ಲಿ 18 ಜಿಂಕೆ ಕೊಂಬು ಪತ್ತೆ ಪ್ರಕರಣ ಸಂಬಂಧ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Advertisement
ಕಾಡು ಕೋಣದ ಕೊಂಬು, ಶ್ರೀಗಂಧ ಸಂಗ್ರಹಣೆ ಮಾಡಿದವರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಅಲ್ಲದೆ, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ದರ್ಪ ತೋರಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಡಿಎಫ್ಓಗೆ ದೂರು ಸಲ್ಲಿಸಿದರು.