ವಿಜಯಸಾಕ್ಷಿ ಸುದ್ದಿ, ಗದಗ: ಬಾಂಗ್ಲಾದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳಿಗೆ ಆ ದೇಶ ರಕ್ಷಣೆ ಒದಗಿಸಬೇಕು. ಭಾರತದಲ್ಲಿರುವ ಬಾಂಗ್ಲಾದೇಶದ ರಾಯಬಾರಿ ತುರ್ತು ಸಂದೇಶ ರವಾನಿಸಬೇಕು ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ ಅಕ್ಕಿ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮ ಪತ್ರಿಕಾ ಹೇಳಿಕೆ ನೀಡಿರುವ ಅವರು, ಯಾವುದೇ ದೇಶ ಸಂಕಷ್ಟದಲ್ಲಿದ್ದರೂ ಅದಕ್ಕೆ ಸ್ಪಂದಿಸುವ ಭಾರತ ದೇಶದ ಹಿರಿಮೆಯಾದರೆ, ಅದೇ ದೇಶದ ಮೂಲ ನಿವಾಸಿಗಳು ವಿಭಜಿತ ಬಾಂಗ್ಲಾದೇಶದ ಹಿಂದೂ ಸಮಾಜದ ದೀಪು ಚಂದ್ರದಾಸ ಅವರ ಬರ್ಬರ ಹತ್ಯೆ ಮಾಡಿರುವುದು ಖಂಡನೀಯ. ಅಪರಾಧಿಗಳನ್ನು ಬಂಧಿಸಿದರೆ ಸಾಲದು, ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಭಾರತದ ವೀರ ಸೈನಿಕರ ಬಲಿದಾನ, ಪರಾಕ್ರಮ ಮತ್ತು ರಾಜತಾಂತ್ರಿಕ ಸಹಕಾರದಿಂದ ಬಾಂಗ್ಲಾದೇಶ ಸ್ವತಂತ್ರವಾಗಿದೆ ಎನ್ನುವುದನ್ನು ಆ ದೇಶದ ಕೆಲ ಮತಾಂಧರಿಗೆ ಗೊತ್ತಾಗಬೇಕಾಗಿದೆ. ಭಾರತಕ್ಕೆ ಆಸರೆ ಕೇಳಿ ಬಂದ ಆ ದೇಶದ ಮಾಜಿ ಪ್ರಧಾನಿಗೆ ಆಶ್ರಯ ನೀಡಿದ್ದು ಭಾರತ. ಬಾಂಗ್ಲಾ ಅಖಂಡ ಭಾರತದ ಭಾಗವಾದರೆ ಇಲ್ಲಿಯ ಮೂಲನಿವಾಸಿ ಹಿಂದೂಗಳೇ ಅಲ್ಲಿ ಅಲ್ಪಸಂಖ್ಯಾತರಾಗಿ ಅವರನ್ನು ಮಾರಣ ಹೋಮ ಮಾಡುತ್ತಿರುವ ಆ ದೇಶದ ಬಹುಸಂಖ್ಯಾತರ ಕೃತ್ಯ ಖಂಡನೀಯ. ಪ್ರತಿಸಾರಿ ಒಂದಿಲ್ಲೊಂದು ಕಾರಣವಿಟ್ಟು ಅಲ್ಲಿಯ ಹಿಂದೂಗಳಿಗೆ ತೊಂದರೆ ನೀಡುತ್ತಿರುವುದನ್ನು ನಿಲ್ಲಿಸಿ ಹಿಂದೂಗಳಿಗೆ ರಕ್ಷಣೆ ನೀಡುವ ತುರ್ತು ಸಂದೇಶ ರವಾನಿಸಬೇಕು ಎಂದು ಆಗ್ರಹಿಸಿದ್ದಾರೆ.



