ಬೆಂಗಳೂರು:- ಉಡುಪಿಯಲ್ಲಿ ಗಾಂಧೀಜಿ ಬಗ್ಗೆ ‘ಪ್ರಚೋದನಕಾರಿ’ ಹೇಳಿಕೆ ನೀಡಿದ ಹಿನ್ನೆಲೆ ಹಿಂದೂ ಕಾರ್ಯಕರ್ತೆ ಮೀನಾಕ್ಷಿ ವಿರುದ್ಧ ಕೇಸ್ ದಾಖಲಾಗಿದೆ.
Advertisement
ಈ ಬಗ್ಗೆ X ನಲ್ಲಿ ಸ್ಪಷ್ಟನೆ ಕೊಟ್ಟಿರುವ ಮೀನಾಕ್ಷಿ, “ನಾನು ‘ರಾಷ್ಟ್ರಪಿತ’ ಎಂದು ಕರೆಯಲ್ಪಡುವ ಗಾಂಧೀಜಿ ಬಗ್ಗೆ ಕೆಲವು ಕಾಮೆಂಟ್ಗಳನ್ನು ಮಾಡಿದ್ದರಿಂದ ನನ್ನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಐತಿಹಾಸಿಕ ಸತ್ಯ ಸಂಗತಿಗಳನ್ನು ನನ್ನ ಭಾಷಣದಲ್ಲಿ ಹೇಳಿದ್ದಕ್ಕಾಗಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ನಾನು ಗಾಂಧೀಜಿ ಬಗ್ಗೆ ಮಾತನಾಡಿದ್ದಕ್ಕೆ ಕೇಸ್ ದಾಖಲಿಸಿದ್ದಾರೆ. ಆದರೆ, ವೀರ ಸಾವರ್ಕರ್, ಭಗತ್ ಸಿಂಗ್, ಭಗವಾನ್ ಶ್ರೀಕೃಷ್ಣ ಮತ್ತು ಶ್ರೀರಾಮನಂತಹ ಹಿಂದೂ ಹೋರಾಟಗಾರರು ಮತ್ತು ಹಿಂದೂ ದೇವರುಗಳನ್ನು ನಿಂದಿಸುವವರ ವಿರುದ್ಧ ಎಂದಿಗೂ ಪ್ರಕರಣಗಳನ್ನು ದಾಖಲಿಸಲಾಗುವುದಿಲ್ಲ ಎಂದು ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಟೀಕಿಸಿದ್ದಾರೆ.