ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಫೆ.13ರಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪ್ಯಾನ್ ಇಂಡಿಯಾ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ಕಾರ್ಮಿಕ ಆಯುಕ್ತರ ಹಾಗೂ ಸಹಾಯಕ ಕಾರ್ಮಿಕರ ಆಯುಕ್ತರ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯ ದುರ್ಗದಬೈಲ್, ಬಟರ್ ಮಾರ್ಕೆಟ್, ಸಿಬಿಟಿ ಸುತ್ತಲಿನ ವ್ಯಾಪ್ತಿಯಲ್ಲಿ ಬರುವ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್, ಬೇಕರಿ, ಗ್ಯಾರೇಜ್ ಮುಂತಾದ ವಾಣಿಜ್ಯ ಸಂಸ್ಥೆಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಕುರಿತು ಜಾಗೃತಿ ಹಾಗೂ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಬಾಲಕಾರ್ಮಿಕರನ್ನು ಅಥವಾ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಮಾಲೀಕರಿಗೆ ಕಾಯ್ದೆಯಡಿ ರೂ. 20ರಿಂದ 50 ಸಾವಿರವರೆಗೆ ದಂಡ ಇಲ್ಲವೆ 6 ತಿಂಗಳಿAದ 2 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶವಿದೆ ಎಂದು ಜಾಗೃತಿಯನ್ನು ಮೂಡಿಸಲಾಯಿತು. ಕರಪತ್ರ ಮತ್ತು ಸ್ಟಿಕರ್ಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಸಾರ್ವಜನಿಕ ಸ್ಥಳ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಅಂಟಿಸಲಾಯಿತು.
ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಬಸವರಾಜ ಪಂಚಾಕ್ಷರಿಮಠ, ಹಿರಿಯ ಕಾರ್ಮಿಕ ನಿರೀಕ್ಷಕರಾದ ರಜನಿ ಹಿರೇಮಠ, ಅಶೋಕ ಒಡೆಯರ್, ಸಂಗೀತಾ ಬೆನಕೊಪ್ಪ, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮುತ್ತು ವಡ್ಡರ್, ಪೊಲೀಸ್ ಇಲಾಖೆಯ ಸಹಾಯಕ ಆರಕ್ಷಕ ನಿರೀಕ್ಷಕ ವಾಯ್.ಎಸ್. ಗೌರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೆಲ್ವೀಚಾರಕಿ ರೇಖಾ ಸೊರಕೊಪ್ಪ ಹಾಗೂ ಇತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮನಿಷಾ ನಾವೆಲ್ಟಿ, ಪಾನ್ ಬಜಾರ್ನಲ್ಲಿ ಒಬ್ಬ ಕಿಶೋರ ಕಾರ್ಮಿಕರನ್ನು ಗುರುತಿಸಿ, ಮಗುವನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪಾಲಕರ ವಶಕ್ಕೆ ಒಪ್ಪಿಸಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಯಿತು.