HomeDharwadಶಾಶ್ವತ ಪರಿಹಾರಕ್ಕೆ ಸಾರ್ವಜನಿಕರ ಒತ್ತಾಯ

ಶಾಶ್ವತ ಪರಿಹಾರಕ್ಕೆ ಸಾರ್ವಜನಿಕರ ಒತ್ತಾಯ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ಪಟ್ಟಣದಲ್ಲಿ ಮೂರು ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ರಸ್ತೆ ಸಂಚಾರವನ್ನೇ ಅಸ್ತವ್ಯಸ್ತಗೊಳಿಸಿದ ಪ್ರದೇಶಗಳಿಗೆ ಶಾಸಕ ಎನ್.ಎಚ್ ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಎಸ್‌ಪಿ ಡಾ. ಗೋಪಾಲ ಬ್ಯಾಕೋಡ ಭೇಟಿ ನೀಡಿ ಪರಿಶೀಲಿದರು.

ಇಬ್ರಾಹಿಂಪುರ ರಸ್ತೆ ಹಳ್ಳದ ಹತ್ತಿರವಿರುವ ಎಸ್.ಎಸ್. ಬಾಗಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಮಳೆಗೆ ಸಿಲುಕಿ ತೊಂದರೆ ಅನುಭವಿಸಿದ್ದು, ಮಕ್ಕಳನ್ನು ಭೇಟಿ ಮಾಡಿ ದೈರ್ಯ ತುಂಬಿದರು. ನಂತರ ಹಾನಿಗೀಡಾದ ಪ್ರದೇಶಳ ವೀಕ್ಷಣೆ ಮಾಡಿದರು.

ಸೋಮವಾರ ಸಂಜೆ ಸುರಿದ ಮಳೆಗೆ ಇಬ್ರಾಹಿಂಪುರ್-ನವಲಗುಂದ ಮಧ್ಯದ ಎರಡು ಹಳ್ಳಗಳು ತುಂಬಿ ಹರಿಯುತ್ತಿದ್ದರೆ, ತಿರ್ಲಾಪುರ, ಯಮನೂರ, ಹಾಳಕುಸುಗಲ, ಇಬ್ರಾಹಿಂಪೂರ ಹಾಗೂ ಪಟ್ಟಣದ ಕೆಲವು ಭಾಗಗಳಲ್ಲಿ ಗಟಾರ್ ತುಂಬಿ ನೀರು ರಸ್ತೆ ಮೇಲೆ ಹರಿದು ರಸ್ತೆ ಸಂಚಾರವನ್ನೇ ಸ್ಥಗಿತಗೊಳಿಸಿತ್ತು.

ಪಟ್ಟಣದ ಮಿನಿ ವಿಧಾನಸೌಧ ಮುಂಭಾಗದ ಗಟಾರು ತುಂಬಿ ರಸ್ತೆ ಮೇಲೆ ನೀರು ಹರಿದು ಪಕ್ಕದ ನೀರಾವರಿ ಕಾಲೋನಿ, ಮನೆಗಳಿಗೆ ನೀರು ನುಗ್ಗಿದರೆ, ರಾಷ್ಟ್ರೀಯ ಹೆದ್ದಾರಿ, ಹುಬ್ಬಳ್ಳಿ ಸೊಲ್ಲಾಪುರ ಶೆಟ್ಟರ ಕೇರಿ ಹತ್ತಿರ ಮಳೆ ನೀರು ಗಟಾರು ತುಂಬಿ ರಸ್ತೆಯ ಮೇಲೆ ಹರಿದಿತ್ತು.ಇನ್ನು ವಸತಿ ಶಾಲೆಗಳಾದ ರಾಣಿ ಚನ್ನಮ್ಮ, ಬಿಸಿಎಂ ಹಾಸ್ಟೆಲ್, ದಿ. ದೇವರಾಜ ಅರಸು ಹಿಂದುಳಿದ ವರ್ಗದ ವಸತಿ ಶಾಲೆ, ಎಲ್.ಐ.ಸಿ ಕಚೇರಿ, ಅಂಬೇಡ್ಕರ್ ನಗರ, ಮಾಡೆಲ್ ಹೈಸ್ಕೂಲ್ ಹತ್ತಿರದ ಕುರಹಟ್ಟಿ ಪ್ಲಾಟ್, ಅಂಬೇಡ್ಕರ್ ನಗರ, ಬಸವೇಶ್ವರನಗರದ ಸರಕಾರಿ ಶಾಲೆಗಳು, ಹಾಗೂ ಹಾದಿ ಬಸವೇಶ್ವರ ದೇವಸ್ಥಾನದ ರಸ್ತೆಗಳು ಜಲಾವೃತಗೊಂಡಿದ್ದವು. ಮಳೆಯಿಂದ ಜನರಿಗೆ ಭಯದ ವಾತಾವರಣ ಸೃಷ್ಟಿಯಾಗಿತ್ತು.

ಪ್ರತಿ ಬಾರಿ ಮಳೆ ಬಂದಾಗಲೂ ಈ ಶಾಲೆ ಮಕ್ಕಳು, ಇಬ್ರಾಹಿಂಪುರ್ ಗ್ರಾಮಸ್ಥರು ಹಾಗೂ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆಯೂ ಕೂಡ ಸಾಕಷ್ಟು ಬಾರಿ ರೈತರು ಹಾಗೂ ಸಾರ್ವಜನಿಕರು ಈ ಎರಡು ಹಳ್ಳಗಳಿಗೆ ಸೇತುವೆ ನಿರ್ಮಾಣ ಮಾಡಿಕೊಡಿ ಎಂದು ಮೌಖಿಕವಾಗಿ ಹಾಗೂ ಮನವಿ ಮುಖಾಂತರ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಹೇಳಿದರೂ ಕೂಡ ಪ್ರಯೋಜನವಾಗುತ್ತಿಲ್ಲ. ಆದಷ್ಟು ಬೇಗನೆ ಶಾಸಕರು ಮುತುವರ್ಜಿ ವಹಿಸಿ ಈ ಎರಡು ಹಳ್ಳಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ ಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.

ಅತಿ ಹೆಚ್ಚು ನೀರು ನುಗ್ಗಿದ ಪ್ರದೇಶಗಳಿಗೆ ತಹಸೀಲ್ದಾರ್ ಸುಧೀರ್ ಸಾಹುಕಾರ, ಪುರಸಭೆ ಮುಖ್ಯಧಿಕಾರಿ ಶರಣು ಪೂಜಾರ, ಸಿಪಿಐ ರವಿಕುಮಾರ ಕಪ್ಪತನ್ನವರ, ಪುರಸಭೆ ಅಧ್ಯಕ್ಷ ಶಿವಾನಂದ ತಡಿಸಿ ಹಾಗೂ ಪುರಸಭೆ ಸದಸ್ಯರು ಭೇಟಿ ನೀಡಿ ಸಮಸ್ಯೆಗಳಿಗೆ ಸ್ಪಂದಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!