ಲೋಕಾಯುಕ್ತದಿಂದ ಸಾರ್ವಜನಿಕರ ಕುಂದು-ಕೊರತೆ ಸಭೆ

0
Public Grievance and Complaint Acceptance Program
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಅವಳಿ ನಗರದ ನಗರಸಭೆಯ ಸಭಾಭವನದಲ್ಲಿ ಬುಧವಾರ ಲೋಕಾಯುಕ್ತ ಡಿಎಸ್‌ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ಅಕಾರಿಗಳು ತಾಲೂಕು ಮಟ್ಟದ ಸಾರ್ವಜನಿಕರ ಕುಂದು-ಕೊರತೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ನಡೆಸಿದರು.

Advertisement

ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒಟ್ಟೂ 9 ಅರ್ಜಿಗಳು ಸ್ವೀಕೃತವಾದವು. ಇವುಗಳಲ್ಲಿ 2 ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿ, ಇನ್ನುಳಿದ ಅರ್ಜಿಗಳ ಬಗ್ಗೆ ಪರಿಶೀಲನೆಗೆ ಪರಿಗಣಿಸಲಾಯಿತು.

ಈ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳಾದ ರವಿ ಪುರುಷೋತ್ತಮ, ಎಸ್.ಎಸ್. ತೇಲಿ, ನಗರಸಭೆಯ ಪೌರಾಯುಕ್ತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ತಹಸೀಲ್ದಾರ್ ಶ್ರೀನಿವಾಸಮೂರ್ತಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here