`ಸಾರ್ವಜನಿಕ ಸುರಕ್ಷಾ ಕಾಯ್ದೆ’ ಅರಿವು ಕಾರ್ಯಕ್ರಮ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಾರ್ವಜನಿಕ ಸುರಕ್ಷಾ ಕಾಯ್ದೆಯ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಗದಗ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಭವನದಲ್ಲಿ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿತ್ತು.

Advertisement

ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್ ನೇಮಗೌಡ, ಸಾರ್ವಜನಿಕ ಸುರಕ್ಷಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ. ಆಯಕಟ್ಟಿನ ಸ್ಥಳದಲ್ಲಿ ಸಾರ್ವಜನಿಕರು ಸಿಸಿ ಟಿವಿ ಅಳವಡಿಸಲು ಮನವಿ ಮಾಡಲಾಗಿತ್ತು. ಅಂತೆಯೇ ಸಾರ್ವಜನಿಕಕು ಖಾಸಗಿ ಅಂಗಡಿ, ರಸ್ತೆ ಪಕ್ಕದ ಮನೆಗಳಲ್ಲಿ ಸಿಸಿ ಟಿವಿ ಅಳವಡಿಸಿದ್ದಾರೆ. ಅವಳಿ ನಗರದ ಪ್ರಮುಖ ರಸ್ತೆಗಳಲ್ಲಿ ಈ ಮೊದಲು ಸಾವಿರ ಇದ್ದ ಸಿಸಿ ಟಿವಿಗಳು ಈಗ ಮೂರು ಸಾವಿರ ದಾಟಿವೆ. ಎಪ್ರಿಲ್ ತಿಂಗಳಾತ್ಯದವರೆಗೆ ನಾಲ್ಕು ಸಾವಿರ ಸಿಸಿ ಟಿವಿ ಅಳವಡಿಸಲು ಜನರಿಗೆ ಕರೆ ನೀಡಿದ್ದೇವೆ. ಜನರಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ, ಮುಂದೆಯೂ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅವಳಿ ನಗರದ ವಿವಿಧ ಸಂಘಟನೆಗಳು, ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here