ಬೈಕ್‌ ಟಚ್‌ ಆಗಿದ್ದಕ್ಕೆ ಕಾರಲ್ಲಿ ಗುದ್ದಿ ಕೊಲೆ: ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್ ಕೇಸ್!

0
Spread the love

ಬೆಂಗಳೂರು:- ಕಾರಿಗೆ ಬೈಕ್‌ ಟಚ್‌ ಆಯಿತು ಎಂದು ಶುರುವಾದ ಜಗಳದಲ್ಲಿ ಒಬ್ಬನ ಜೀವವನ್ನೇ ತೆಗೆದಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

Advertisement

ಡೆಲಿವರಿ ಬಾಯ್ ಮಹೇಶ್ ಎಂಬಾತನೇ ಮೃತಪಟ್ಟ ಯುವಕ ಎನ್ನಲಾಗಿದೆ. ಮಹೇಶ್, ಬುಧವಾರ ಸಂಜೆ ಗೆಳೆಯರಾದ ಬಾಲಾಜಿ ಮತ್ತು ನಿಖಿಲ್ ಜೊತೆ ಟೀ ಕುಡಿಯಲು ಹೋಗಿದ್ದ. ಟೀ ಕುಡಿದು ಬೈಕ್‌ನಲ್ಲಿ ಬರುವಾಗ ಸ್ಪೀಡಾಗಿ ಬಂದ ಕಾರು ಹಾರ್ನ್‌ ಮಾಡಿದರೂ ಸೈಡ್‌ ಕೊಟ್ಟಿಲ್ಲ. ಈ ವೇಳೆ ಕಾರಿಗೆ ಬೈಕ್‌ ಸ್ವಲ್ಪ ಟಚ್‌ ಆಗಿತ್ತಂತೆ. ಇದೇ ಸಿಟ್ಟಲ್ಲಿ ಕಾರು ಚಾಲಕ ಅರವಿಂದ್, ಬೈಕ್‌ ಚಾಲಕನನ್ನ ಚೇಸ್ ಮಾಡಿಕೊಂಡು ಹೋಗಿದ್ದಾನೆ.

ಮುಖ್ಯ ರಸ್ತೆಯಿಂದ ತಿರುಗಿಸುವಾಗ ಬೈಕ್‌ನಲ್ಲಿ ಹಿಂಬದಿ ಕೂತಿದ್ದ ಇಬ್ಬರು ಕೆಳಗೆ ಬಿದ್ದಿದ್ದಾರೆ. ಆದರೆ, ಜಿಕೆವಿಕೆ ಲೇಔಟ್‌ಗೆ ನುಗ್ಗಿದ ಮಹೇಶ್ ಬೈಕ್‌ಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ತಿರುವಿನಲ್ಲಿದ್ದ ಮನೆಯ ಕಾಂಪೌಂಡ್‌ಗೆ ಮಹೇಶ್ ತಲೆ ಬಡಿದಿದೆ.

ಇನ್ನೂ , ಅಪಘಾತದ ನಂತರ ಗಾಯಗೊಂಡಿದ್ದ ಮಹೇಶ್‌ನನ್ನ ಹೊತ್ತೊಯ್ಯಲು ಕಾರು ಚಾಲಕ ಮುಂದಾಗಿದ್ದಾನೆ. ಆದರೆ, ರಕ್ತದ ಮಡುವಿನಲ್ಲಿದ್ದ ಮಹೇಶ್ ಸಾವನ್ನಪ್ಪಿದ್ದಾನೆ.

ನಂತರ ಆರೋಪಿ ಅರವಿಂದ್‌ ಮತ್ತು ಕೇಶವ್‌ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪ್ಪಿಕೊಂಡ ಬಾಲಾಜಿ ಎಂಬ ಯುವಕ ನೀಡಿದ ದೂರಿನ ಅನ್ವಯ ವಿದ್ಯಾರಾಣ್ಯಪುರ ಪೊಲೀಸರು ಕೊಲೆ ಕೇಸ್ ದಾಖಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here