ತುಮಕೂರು:- ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು ಪುಸಲಾಯಿಷಿ ಆಕೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ರಾಮಚಂದ್ರಪ್ಪಗೆ ಒಟ್ಟು 14 ದಿನಗಳ ಕಾಲ ನ್ಯಾಯಾಂಗ ಬಂದನ ವಿಧಿಸಿ ಮಧುಗಿರಿ ಜೆಎಂಎಫ್ಸಿ ಕೋರ್ಟ್ ಆದೇಶ ನೀಡಿದೆ.ಸೋಮವಾರದವರೆಗೂ ಮಧುಗಿರಿ ಜೈಲಿನಲ್ಲಿರುವ ಡಿವೈಎಸ್ ಪಿ ರಾಮಚಂದ್ರಪ್ಪ, ಆ ಬಳಿಕ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್ ಮಾಡಲು ಆದೇಶಿಸಲಾಗಿದೆ.
ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮಹಿಳೆಯೊಬ್ಬರು ತಮ್ಮ ಜಮೀನಿನ ಕುರಿತಾಗಿ ವ್ಯಾಜ್ಯ ಆರಂಭವಾಗಿದ್ದು, ನೀವು ನಮಗೆ ನ್ಯಾಯ ಕೊಡಿಸಬೇಕು ಎಂದು ಮಹಿಳೆ ದೂರು ನೀಡಿದ್ದರು. ಆಗ ಮಹಿಳೆಗೆ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ಧನಾತ್ಮಕವಾಗಿ ಮಾತನಾಡಿದ್ದ ಡಿವೈಎಸ್ಪಿ ರಾಮಚಂದ್ರಪ್ಪ ನಾವು ವಿಚಾರಣೆಗೆ ಕರೆದಾಗ ಪೊಲೀಸ್ ಠಾಣೆಗೆ ಬರಬೇಕು. ನಾವು ಕೇಳಿದಾಗ ನೀವು ಮಾಹಿತಿ ಕೊಡಬೇಕು ಎಂದು ಹೇಳಿರುತ್ತಾರೆ. ಇದಕ್ಕೆ ಮಹಿಳೆಯೂ ಒಪ್ಪಿಕೊಂಡಿದ್ದಾರೆ.
ಬಳಿಕ ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ಕಚೇರಿಯಲ್ಲಿರುವ ಆ್ಯಂಟಿ ಚೇಂಬರ್ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಕೃತ್ಯ ಮೊಬೈಲ್ಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು.
ಪ್ರಕರಣ ಕಂಡು ಡಿವೈಎಸ್ಪಿ ರಾಮಚಂದ್ರಪ್ಪರನ್ನ ಅಮಾನತು ಮಾಡಿದ್ದರು. ಇನ್ನೂ ಇದಾದ ಬಳಿಕ ನೊಂದ ಮಹಿಳೆ ನೀಡಿದ ದೂರಿನ ಮೇರೆಗೆ ಮನೆಯಲ್ಲಿಯೇ ಇದ್ದ ಡಿವೈಎಸ್ಪಿ ರಾಮಚಂದ್ರಪ್ಪರನ್ನ ಮಧುಗಿರಿ ಪೊಲೀಸರು ಬಂಧಿಸಿದ್ದರು. ಇದೀಗ ಮಧುಗಿರಿ ಜೆಎಂಎಫ್ಸಿ ನ್ಯಾಯಾಲಯದಿಂದ 14 ದಿನ ನ್ಯಾಯಾಂಗ ಬಂಧನ ನೀಡ ಆದೇಶ ಹೊರಡಿಸಲಾಗಿದೆ.