ರಾಯಚೂರು: ಕರ್ನಾಟಕದ ಹಲವೆಡೆ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುವ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಮನೆ ಹಾಗೂ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ರಾಜ್ಯದಲ್ಲಿ ಏಕಕಾಲದಲ್ಲಿ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅದೇ ರೀತಿ ನಿರ್ಮಿತಿ ಕೇಂದ್ರದ ಯೋಜನಾ ನಿದೇರ್ಶಕನ ಶರಣ ಬಸವ ಪಟ್ಟೇದ್ ಮನೆ ಮೇಲೆ ದಾಳಿ ನಡೆಸಲಾಗಿದೆ.
ಕ್ಯಾಶೋಟಕ್ ಯೋಜನ ನಿರ್ದೇಶಕ ಶರಣಬಸವ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ರೇಡ್ ಮಾಡಲಾಗಿದ್ದು, ಗಂಗಾಪರಮೇಶ್ವರಿ ಕಾಲೋನಿ, ಐಡಿಎಸ್ ಎಂಟಿ ಲೇಔಟ್ ಮನೆ ಸೇರಿ ಲೋಕಾಯುಕ್ತ ಎಸ್ಪಿ ಡಾ. ರಾಮ್ ಎಲ್ ಅರಸಿ ಅವರ ನೇತೃತ್ವದಲ್ಲಿ ನಾಲ್ಕು ಕಡೆ ದಾಳಿ ಮಾಡಲಾಗಿದೆ.



