ವೃದ್ಧಾಶ್ರಮಕ್ಕೆ ನೆರವಾದ ರಾಯಚೂರಿನ ಪೊಲೀಸ್ ಪಡೆ: ಸಾರ್ವಜನಿಕರ ಮೆಚ್ಚುಗೆ!

0
Spread the love

ರಾಯಚೂರು:- ಇಲ್ಲಿನ ನಿರ್ಗತಿಕ ಆಶ್ರಮವೊಂದಕ್ಕೆ ರಾಯಚೂರು ಪೊಲೀಸರು, ಹೆಗಲಾಗಿದ್ದು, ಸಾರ್ವಜನಿಕರು ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

ಜಿಲ್ಲೆ ಸಿಂಧನೂರು ಪಟ್ಟಣದ ಹೊರ ಭಾಗದಲ್ಲಿರುವ ಕಾರುಣ್ಯ ವೃದ್ಧಾಶ್ರಮವು ಅನಾಥರು, ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವ, ಬುದ್ಧಿಮಾಂದ್ಯರು ಮತ್ತು ಹಿರಿಯ ಜೀವಿಗಳ ಆಶ್ರಯ ತಾಣವಾಗಿದೆ.

ಹೀಗಾಗಿ, ಆಶ್ರಮದಲ್ಲಿ ಹಂತಹಂತವಾಗಿ ನಿರ್ಗತಿಕರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ವಸತಿಗೆ ಸಮಸ್ಯೆಯಾಗುತ್ತಿತ್ತು. ಈ ಸಮಸ್ಯೆಯನ್ನು ಬಗೆಹರಿಸಲು ಪೊಲೀಸ್ ಪಡೆ ಆಶ್ರಮಕ್ಕೆ ಹೊಸ ಕಟ್ಟಡ ಕಟ್ಟಿಸಿ ಕೊಟ್ಟಿದೆ.

ರಾಯಚೂರಿನ 2005 ನೇ ಬ್ಯಾಚ್​​ನ ಸಿವಿಲ್ ಸರ್ವಿಸ್​ನ ಪೊಲೀಸ್ ಸಿಬ್ಬಂದಿ ತಮ್ಮ ವೃತ್ತಿ ಜೀವನ ಆರಂಭವಾಗಿ 20 ವರ್ಷಗಳಾದ ಹಿನ್ನೆಲೆ ಸಮಾಜಕ್ಕೆ ಒಂದೊಳ್ಳೆ ಸಂದೇಶ ಕೊಡುವ ನಿಟ್ಟಿನಲ್ಲಿ, ನಿರ್ಗತಿಕರ ಲಾಲನೆ, ಪಾಲನೆ ಮಾಡುತ್ತಿರುವ ಕಾರುಣ್ಯ ಆಶ್ರಮಕ್ಕೆ ಕಟ್ಟಡ ನಿರ್ಮಿಸಿ ಕೊಟ್ಟಿದ್ದಾರೆ.

ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here