ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ಹೊರವಲಯದಲ್ಲಿ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಜರುಗಿದೆ. ಜೋರು ಗಾಳಿ, ಮಳೆಗೆ ಈ ಅವಘಡ ಸಂಭವಿಸಿದೆ.
ಸವಣೂರು (52), ಚನ್ನಾಪುರ (50) ಮೃತ ಕಾರ್ಮಿಕರು. ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಮಹಾಂತೇಶ ಚವರಗುಡ್ಡ ಎಂಬವರಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಿರ್ಮಾಣ ಆಗುತ್ತಿರುವ ಕಟ್ಟಡದ ಗಾರೆ ಕೆಲಸಕ್ಕೆ ಕೂಲಿ ಕಾರ್ಮಿಕರು ತೆರಳಿದ್ದರು. ಮಳೆ, ಗಾಳಿ ಜೋರಾಗಿ ಬೀಸಿದ್ದರಿಂದ ಗೋಡೆಯ ಬಳಿ ನಿಂತಿದ್ದರು. ಗಾಳಿ ರಭಸಕ್ಕೆ ಗೋಡೆ ಕುಸಿದು ಕೆಳಗೆ ಸಿಲುಕಿ ಸಾವು ಸಂಭವಿಸಿದೆ



