ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ: ನದಿಗೆ ಬಿದ್ದ 2 ಕಾರುಗಳು!

0
Spread the love

ಚಿಕ್ಕಮಗಳೂರು:- ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ ಜಫರಾಗಿದ್ದು, ಭಾರೀ ಅವಾಂತರಗಳೇ ಸೃಷ್ಟಿಸಿದೆ. ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಚಾಲಕನ ‌ನಿಯಂತ್ರಣ ತಪ್ಪಿ ಎರಡು ಕಾರುಗಳು ಹೇಮಾವತಿ ನದಿಗೆ ಉರುಳಿಬಿದ್ದಿವೆ.

Advertisement

1 ಗಂಟೆಯ ಅಂತರದಲ್ಲಿ ಎರಡು ಕಾರುಗಳು ಪಲ್ಟಿಯಾಗಿವೆ. ಚಕಮಕ್ಕಿ ಗ್ರಾಮದ ಬಳಿ‌ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಸ್ಥಳೀಯರು, ಹಗ್ಗದಿಂದ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ.

ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಮುಂಗಾರು ಆರಂಭದಲ್ಲೇ ಹೀಗಾದರೆ, ಮಳೆಯ ತೀವ್ರತೆ ಹೆಚ್ಚಾದರೆ ಪರಿಸ್ಥಿತಿ ಹೇಗೆ ಎಂಬ ಆತಂಕ ಎದುರಾಗಿದೆ.


Spread the love

LEAVE A REPLY

Please enter your comment!
Please enter your name here