ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಮಳೆ: ಹವಾಮಾನ ಇಲಾಖೆ

0
Spread the love

ಬೆಂಗಳೂರು: ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ ವ್ಯಕ್ತವಾಗಿದೆ. ನಗರ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ವಾರಾಂತ್ಯದವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ತಂಪು ಹೆಚ್ಚಾಗಿದ್ದು, ಮೋಡ ಕವಿದ ವಾತಾವರಣ ಮತ್ತು ಮಧ್ಯ ಮಧ್ಯೆ ತುಂತುರು ಮಳೆ ಕಂಡುಬರುತ್ತಿದೆ. ಇದೇ ರೀತಿಯ ಹವಾಮಾನ ಭಾನುವಾರವರೆಗೂ ಮುಂದುವರಿಯಲಿದೆ ಎನ್ನಲಾಗಿದೆ. ಬೆಳಿಗ್ಗೆ ತಂಪಾದ ವಾತಾವರಣ ಮತ್ತು ಸಂಜೆ ವೇಳೆ ಮಳೆಯ ಸಾಧ್ಯತೆ ಹೆಚ್ಚಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮೀಣ ಭಾಗಗಳಲ್ಲಿ ಮಳೆ-ಗುಡುಗು ಸಂಭವಿಸಬಹುದು. ಪ್ರತ್ಯೇಕ ಪ್ರದೇಶಗಳಲ್ಲಿ ಮಿಂಚು-ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ರೈತರು ಮತ್ತು ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಇಲಾಖೆಯು ಸಲಹೆ ನೀಡಿದೆ.

, ಈಗಿನ ಮಳೆಯ ಪ್ರಮುಖ ಕಾರಣ ತೇವಾಂಶದ ಏರಿಕೆ ಮತ್ತು ಸಮುದ್ರ ಮಟ್ಟದಲ್ಲಿನ ವಾಯುಭಾರ ಕುಸಿತ. ಬೆಳಿಗ್ಗೆ ಮತ್ತು ಸಂಜೆ ವೇಳೆ ತೇವಾಂಶ ಹೆಚ್ಚಿರುವುದರಿಂದ, 15–30 ನಿಮಿಷಗಳಷ್ಟು ಮಾತ್ರವಿದ್ದರೂ ಮಳೆಯ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಮಂಜು ಕವಿದ ವಾತಾವರಣ ಇರಲಿದ್ದು, ಗಾಳಿಯ ವೇಗ ಪ್ರತಿ ಗಂಟೆಗೆ 13 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 26.8°C ಮತ್ತು ಕನಿಷ್ಠ ತಾಪಮಾನ 17°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಬದಲಾಗುತ್ತಿರುವ ಹವಾಮಾನದೊಂದಿಗೆ ವಿಪರೀತ ಚಳಿಯಿದ್ದು, ಇನ್ನೂ ಎರಡು ದಿನ ವಾತಾವರಣ ಇದೇ ರೀತಿ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.


Spread the love

LEAVE A REPLY

Please enter your comment!
Please enter your name here