ಮಳೆ ಅವಾಂತರ: ನೂರಾರು ಎಕರೆ ಬೆಳೆ ನಾಶ – ರೈತ ಕಂಗಾಲು

0
Spread the love

ಬೀದರ್:- ಬೀದರ್ ತಾಲೂಕಿನ ಕೊಳ್ಳಾರ ಮತ್ತು ಅಣದೂರು ಗ್ರಾಮದ ಸುತ್ತಮುತ್ತಲು ಸುರಿದ ಭೀಕರ ಮಳೆಗೆ ನೂರಾರು ಎಕರೆ ಬೆಳೆ ನಾಶವಾಗಿದೆ.

Advertisement

ಸೋಯಾ, ಉದ್ದು, ತೊಗರಿ, ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ಜಮೀನಿನಲ್ಲಿ 3 ರಿಂದ 4 ಅಡಿ ನೀರು ನಿಂತಿದ್ದು, ಇಡೀ ಜಮೀನು ಅಕ್ಷರಶಃ ಕೆರೆಯಂತಾಗಿವೆ. ಪರಿಣಾಮ ನೀರಿನಲ್ಲಿ ಮುಳುಗಡೆಯಾದ ಬೆಳೆಗಳು ಕೊಳೆತು ಹೋಗಿವೆ. ಒಂದು ವಾರದ ಹಿಂದೆಯೇ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿತ್ತು. ಈವರೆಗೂ ಮಳೆ ಕಡಿಮೆಯಾಗದೇ ಜಿಲ್ಲೆಯ ಜನರು ಪರದಾಡುವಂತಾಗಿದೆ

ಸಾಲ ಮಾಡಿ, ಸಾವಿರಾರು ರೂಪಾಯಿ ಹಣ ಖರ್ಚು ಮಾಡಿ ಬಿತ್ತನೆ ಮಾಡಿದ್ದ ಬೆಳೆ, ಮಳೆಯಿಂದಾಗಿ ಸಂಪೂರ್ಣ ನಾಶವಾಗಿದೆ. ಇದರಿಂದ ರೈತರು ಕಣ್ಣೀರು ಹಾಕುತ್ತಿದ್ದು, ಯಾವ ಶಾಸಕರು, ಅಧಿಕಾರಿಗಳು ನಮಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here