ರಾಜಭವನಕ್ಕೆ ಬಾಂಬ್ ಬೆದರಿಕೆ ಕೇಸ್: ಆರೋಪಿ ಬಂಧನ

0
Spread the love

ಬೆಂಗಳೂರು:- ರಾಜಭವನಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ವಡ್ಡಹಳ್ಳಿ ಗ್ರಾಮದ ಭಾಸ್ಕರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ರಾಷ್ಟ್ರೀಯ ತನಿಖಾ ದಳದ ದೊಮ್ಮಲೂರಿನ ನಿಯಂತ್ರಣ ‌ಕೊಠಡಿಗೆ ಸೋಮವಾರ ರಾತ್ರಿ 11.30ರ ಸುಮಾರಿಗೆ ಕರೆ‌ ಮಾಡಿದ್ದ ಆರೋಪಿ, ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಸಿದ್ದ.

ಮಾಹಿತಿ‌ ಗೊತ್ತಾಗುತ್ತಿದ್ದಂತೆ ಸ್ಥಳೀಯ ‌ಪೊಲೀಸರು ರಾಜಭವನಕ್ಕೆ ‌ಭೇಟಿ ನೀಡಿ ರಾತ್ರಿಯಿಡೀ ಶೋಧ ನಡೆಸಿದ್ದರು. ಇದೊಂದು ಹುಸಿ ಬೆದರಿಕೆಯೆಂದು ಘೋಷಿಸಿದ್ದರು.

ಬೆದರಿಕೆ ಕರೆ ಮಾಡಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ವಿಶೇಷ ತಂಡ ರಚಿಸಲಾಗಿತ್ತು. ಬಂಧಿತ ಆರೋಪಿ ಭಾಸ್ಕರನನ್ನು ವಿಚಾರಣೆ ನಡೆಸಲಾಗುತ್ತಿದೆ. ಯಾವ ಕಾರಣಕ್ಕೆ ಕರೆ ಮಾಡಿದ್ದಾನೆ ಎಂಬುದು ಗೊತ್ತಾಗಿಲ್ಲ. ವಿಚಾರಣೆ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.


Spread the love

LEAVE A REPLY

Please enter your comment!
Please enter your name here