HomeBengaluru Cityರಾಮಮೂರ್ತಿ ನಗರ ಸಾಫ್ಟ್‌ವೇರ್ ಉದ್ಯೋಗಿ ಶರ್ಮಿಳಾ ಸಾವು ಪ್ರಕರಣ: ತನಿಖೆ ವೇಳೆ ಭಯಾನಕ ಸತ್ಯ ಬಯಲು

ರಾಮಮೂರ್ತಿ ನಗರ ಸಾಫ್ಟ್‌ವೇರ್ ಉದ್ಯೋಗಿ ಶರ್ಮಿಳಾ ಸಾವು ಪ್ರಕರಣ: ತನಿಖೆ ವೇಳೆ ಭಯಾನಕ ಸತ್ಯ ಬಯಲು

Spread the love

“ರಾಮಮೂರ್ತಿ ನಗರ ಸಾಫ್ಟ್‌ವೇರ್ ಉದ್ಯೋಗಿ ಶರ್ಮಿಳಾ ಸಾವು: ನಿಗೂಢತೆ ಬಿಚ್ಚಿಟ್ಟ ತನಿಖೆ, ಹತ್ಯೆ ಪ್ರಕರಣವಾಗಿ ದಾಖಲು – 18 ವರ್ಷದ ಯುವಕನ ಬಂಧನ”

ಬೆಂಗಳೂರು: ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಸಾಫ್ಟ್‌ವೇರ್ ಉದ್ಯೋಗಿ ಶರ್ಮಿಳಾ ನಿಗೂಢ ಸಾವು ಪ್ರಕರಣದಲ್ಲಿ ಇದೀಗ ಮಹತ್ವದ ತಿರುವು ಸಿಕ್ಕಿದೆ. ಆರಂಭದಲ್ಲಿ ಅಸಹಜ ಸಾವೆಂದು ಪರಿಗಣಿಸಲಾಗಿದ್ದ ಪ್ರಕರಣ, ಪೊಲೀಸ್ ತನಿಖೆ ವೇಳೆ ಹತ್ಯೆಯೆಂದು ದೃಢಪಟ್ಟಿದೆ.

ಪೊಲೀಸರ ತನಿಖೆಯ ಪ್ರಕಾರ, ಶರ್ಮಿಳಾರ ಕೊಲೆಯನ್ನು 18 ವರ್ಷದ ಯುವಕ ಕರ್ಣಲ್ ಕುರೈ ಎಸಗಿದ್ದಾನೆ ಎಂಬುದು ಬೆಳಕಿಗೆ ಬಂದಿದೆ. ಸುಬ್ರಮಣ್ಯ ಲೇಔಟ್‌ನಲ್ಲಿರುವ ಶರ್ಮಿಳಾ ಮನೆಯ ಎದುರಿನ ಮನೆಯಲ್ಲಿ ವಾಸವಿದ್ದ ಕರ್ಣಲ್, ಶರ್ಮಿಳಾರನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದನು. ಆದರೆ ಈ ವಿಷಯ ಶರ್ಮಿಳಾಗೆ ತಿಳಿದಿರಲಿಲ್ಲ.

ಜನವರಿ 3ರಂದು ರಾತ್ರಿ 9 ಗಂಟೆ ಸುಮಾರಿಗೆ ಆರೋಪಿ ಶರ್ಮಿಳಾ ಮನೆಗೆ ನುಗ್ಗಿ, ಆಕೆಯನ್ನು ತಬ್ಬಿ ಅನುಚಿತವಾಗಿ ವರ್ತಿಸಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಶರ್ಮಿಳಾ ಆತನನ್ನು ತಳ್ಳಿದಾಗ, ಕೋಪಗೊಂಡ ಆರೋಪಿ ಆಕೆಯ ಮೇಲೆ ಹಲ್ಲೆ ನಡೆಸಿ, ಬಳಿಕ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಶರ್ಮಿಳಾ ಮಲಗಿದ್ದ ಕೊಠಡಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ.

ಮಂಗಳೂರು ಮೂಲದ ಶರ್ಮಿಳಾ ಕಳೆದ ಎರಡು ವರ್ಷಗಳಿಂದ ರಾಮಮೂರ್ತಿ ನಗರದ ಸುಬ್ರಮಣ್ಯ ಲೇಔಟ್‌ನಲ್ಲಿ ವಾಸವಾಗಿದ್ದು, ನಗರದ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು.

ಜನವರಿ 3ರಂದು ರಾತ್ರಿ 10.30ರ ಸುಮಾರಿಗೆ ಮನೆಗೆ ಬೆಂಕಿ ಬಿದ್ದಿರುವುದನ್ನು ಕಂಡ ಮನೆ ಮಾಲೀಕ ವಿಜಯೇಂದ್ರ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ, ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ಮನೆ ಒಳಗಿನ ವಸ್ತುಗಳು ಸುಟ್ಟುಹೋಗಿದ್ದವು ಹಾಗೂ ಶರ್ಮಿಳಾ ಪ್ರಜ್ಞಾಹೀನಳಾಗಿ ಬಿದ್ದಿದ್ದರು. ಆಸ್ಪತ್ರೆಗೆ ದಾಖಲಿಸಿದರೂ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.

ಆದಿಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಸಮಗ್ರ ತನಿಖೆ ಬಳಿಕ ಇದು ಕೊಲೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!