ರಾಮನಗರ:- ಕುರಿಗಳ ಮೈತೊಳೆಯಲು ಹೋಗಿ ದಂಪತಿ ನೀರುಪಾಲಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಗ್ರಾಮ ಗುಂಗರಹಳ್ಳಿ ಗ್ರಾಮದಲ್ಲಿ ಜರುಗಿದೆ.
Advertisement
ಕೆರೆಯಲ್ಲಿ ಕುರಿಗಳ ಮೈತೊಳೆಯಲು ಹೋದವೇಳೆ ದುರ್ಘಟನೆ ಸಂಭವಿಸಿದೆ. ಗುಂಗರಹಳ್ಳಿ ಗ್ರಾಮದ ಲಕ್ಷ್ಮಣ (71) ಹಾಗೂ ಜಯಮ್ಮ (65) ನೀರುಪಾಲಾದ ದಂಪತಿ. ಪತ್ನಿ ಜಯಮ್ಮ ಮೃತದೇಹ ಪತ್ತೆಯಾಗಿದ್ದು, ಲಕ್ಷ್ಮಣ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ.
ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


