ಬೆಂಗಳೂರು:– ರಾಮನಗರ ಹೆಸರು ಬದಲಾವಣೆ ಆದ್ರೂ ರಸ್ತೆ ಗುಂಡಿ ಸುಧಾರಣೆ ಕಾಣಲ್ಲ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.
.
ಈ ಸಂಬಂಧ X ಮಾಡಿರುವ ಅವರುರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ) ಅಂತ ಮರು ನಾಮಕರಣ ಮಾಡಿರೋ ಸರ್ಕಾರದ ನಡೆಗೆ ತೀವ್ರ ಹೊರ ಹಾಕಿದ್ದಾರೆ. ರಿಯಲ್ ಎಸ್ಟೇಟ್ ಯೋಜನೆಯ ಕರಪತ್ರದಂತೆ ಮರು ನಾಮಕರಣ ಮಾಡಲಾಗುತ್ತಿದೆ ಎಂದು ಗುಡುಗಿದ್ದಾರೆ.
ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸುವುದು ಅಭಿವೃದ್ಧಿಯಲ್ಲ, ಅದು ಒಂದು ಫಲಕ ಬದಲಾವಣೆ ಮಾತ್ರ. ಐತಿಹಾಸಿಕವಾಗಿ ಆಳವಾದ ಬೇರುಗಳು ಮತ್ತು ಇತಿಹಾಸ ಹೊಂದಿರುವ ಜಿಲ್ಲೆಯನ್ನು ರಿಯಲ್ ಎಸ್ಟೇಟ್ ಯೋಜನೆಯ ಕರಪತ್ರದಂತೆ ಮರುನಾಮಕರಣ ಮಾಡಲಾಗುತ್ತಿದೆ.
ಊರ ಹೆಸರು ಮರುನಾಮಕರಣವು ಬೆಳವಣಿಗೆಗೆ ಮಾಂತ್ರಿಕ ದಂಡವಾಗಿದ್ದರೆ, ಕನಕಪುರವನ್ನು ಕೌಲಲಾಂಪುರ್ ಎಂದು ಮರುನಾಮಕರಣ ಮಾಡಿ ಈಗ ಅಂತರರಾಷ್ಟ್ರೀಯ ನಗರವಾಗಿ ಪರಿವರ್ತಿಸಬಹುದಿತ್ತು. ಆದರೆ ದುಃಖಕರವೆಂದರೆ, ನಿಮ್ಮ ಹೊಸ ನಾಮಕರಣದಿಂದ ರಸ್ತೆ ಗುಂಡಿಗಳು ಸುಧಾರಣೆ ಕಾಣುವುದಿಲ್ಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.