ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಹಾಕುಂಭಮೇಳ ಭಕ್ತರನ್ನ ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ದಿನ ಕಳೆದಂತೆ ಭಕ್ತ ಸಾಗರ ತ್ರಿವೇಣಿ ಸಂಗಮದಲ್ಲಿ ಮಿಂದು ಪುನೀತರಾಗುತ್ತಿದ್ದಾರೆ. ಈ ಬಾರಿಯ ಮಹಾಕುಂಭಮೇಳ 3 ಅಮೃತ ಸ್ನಾನಕ್ಕೆ ಸಾಕ್ಷಿಯಾಗಿದೆ.
Advertisement
ಅದರಂತೆ ಮಹಾ ಕುಂಭಮೇಳದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ಮೊನ್ನೆಯಷ್ಟೇ ರಾಜಕೀಯ ಬದ್ದ ವೈರಿ ಡಿಕೆ ಶಿವಕುಮಾರ್ ಕೂಡ ಪ್ರಯಾಗ್ರಾಜ್ ಗೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಕೂಡ ಪ್ರಯಾಗ್ರಾಜ್ ಗೆ ಭೇಟಿ ನೀಡಿ ಅಮೃತ ಸ್ನಾನದಲ್ಲಿ ಮಿಂದೆದ್ದಿದ್ದಾರೆ.