ವಿಜಯಸಾಕ್ಷಿ ಸುದ್ದಿ, ಗದಗ: ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಕುತುಬ್ ಎ ರಂಜಾನ್ ಹಬ್ಬದ ನಿಮಿತ್ತ ಡಂಬಳ ನಾಕಾದ ಹತ್ತಿರವಿರುವ ಈದ್ಗಾ ಮೈದಾನದಲ್ಲಿ ಎಲ್ಲ ಮುಸ್ಲಿಂ ಬಾಂಧವರು ಭಕ್ತಿಯಿಂದ ಪ್ರಾರ್ಥನೆಯನ್ನು ಸಲ್ಲಿಸಿದರು. ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸದಸ್ಯರು, ಗದಗ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಕಿಶೋರಬಾಬು ಜೆ.ನಾಗರಕಟ್ಟಿಯವರು ತಮ್ಮ ಪರಿವಾರ ಹಾಗೂ ಸ್ನೇಹಿತರೊಂದಿಗೆ ಪ್ರಾರ್ಥನೆ ಸಲ್ಲಿಸಿ, ಕಾನೂನು, ಸಂಸದೀಯ ವ್ಯವಹಾರ, ಪ್ರವಾಸೋದ್ಯಮ ಸಚಿವರಾದ ಎಚ್.ಕೆ. ಪಾಟೀಲರೊಂದಿಗೆ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು.
ಈ ವೇಳೆ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಬಿ.ಬಿ. ಅಸೂಟಿ, ಅಂಜುಮನ್ ಇಸ್ಲಾಂ ಸಂಸ್ಥೆಯ ಮಾಜಿ ಅಧ್ಯಕ್ಷ ಸಾದಿಕ ನರಗುಂದ, ಪ್ರಾಚ್ಯವಸ್ತು ಶಾಸ್ತçಜ್ಞರಾದ ಅ.ದ. ಕಟ್ಟಿಮನಿ, ಫಾರೂಕ ಹುಬ್ಬಳ್ಳಿ ಮುಂತಾದವರು ಉಪಸ್ಥಿತರಿದ್ದರು.