ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಬೆಟಗೇರಿ-ನರಸಾಪುರ ಮಧ್ಯದಲ್ಲಿರುವ ಪೂಜ್ಯ ರಂಗಾವಧೂತರ ತಪೋಭೂಮಿಯಲ್ಲಿ ಪೂಜ್ಯ ವೀರಪ್ಪಜ್ಜ ಹಾಗೂ ಪೂಜ್ಯ ರಂಗಪ್ಪಜ್ಜ ಗುರು ಶಿಷ್ಯರ 97ನೇ ಜೋಡು ರಥೋತ್ಸವ ಜರುಗಿತು. ರಂಗಪ್ಪಜ್ಜನ ಮಠದಲ್ಲಿ ಅಲಂಕೃತವಾದ ಗಡ್ಡಿತೇರು ಪೂಜ್ಯ ವೀರಪ್ಪಜ್ಜನ ರಥ ಸಿದ್ಧಪಡಿಸಲಾಗಿತ್ತು. ಬೆಟಗೇರಿ ಮಂಜುನಾಥ ನಗರದ ನಾಗಲಿಂಗೇಶ್ವರ ಯುವಕ ಮಂಡಳಿ ಹಾಗೂ ಶಿವಾಜಿ ನಗರದ ವಿನಾಯಕ ಗೆಳೆಯರ ಬಳಗದವರು ಬೃಹತ್ ಗಾತ್ರದ ಹೂಮಾಲೆ ಅರ್ಪಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಗಣೇಶಸಿಂಗ್ ಬ್ಯಾಳಿ, ಅಮರೇಶ ಚ್ಯಾಗಿ, ನಿಂಗಪ್ಪ ಚೇಗೂರ, ಮೈಲಾರಪ್ಪ ಅರಣಿ, ರುದ್ರಪ್ಪ ಬಾದರದಿನ್ನಿ, ಭೋಜಪ್ಪ ಹೆಗ್ಗಡಿ, ಮಹದೇಹಸಾ ಮೇರವಾಡೆ, ಹೇಮಂತಗೌಡ ಬೆನಹಾಳ, ರಾಜು ಕಟಗಿ, ಮಲ್ಲೇಶಪ್ಪ ಐಲಿ, ವಿಜಯ ಕಬಾಡಿ, ದುರ್ಗಾಸಿಂಗ್ ಕಾಟೇವಾಲ, ರಂಗಪ್ಪ ದ್ಯಾವಣಸಿ, ನಗರಸಭಾ ಸದಸ್ಯರಾದ ರಾಘವೇಂದ್ರ ಯಳವತ್ತಿ, ಶಕುಂತಲಾ ಅಕ್ಕಿ ಸೇರಿದಂತೆ ನೂರಾರು ಸಾಧು ಸಂತರು ಸೇರಿದಂತೆ ಸಾವಿರಾರು ಸದ್ಭಕ್ತರು ಪಾಲ್ಗೊಂಡಿದ್ದರು.
ರಂಗಾವಧೂತರ ತಪೋಭೂಮಿಯಲ್ಲಿ ನಡೆದ ಜೋಡು ರಥೋತ್ಸವಕ್ಕೆ ಸಹಕರಿಸಿದ ಸಮಸ್ತ ಸದ್ಭಕ್ತರಿಗೆ, ದಾನಿಗಳಿಗೆ, ಗದಗ-ಬೆಟಗೇರಿ ನಗರಸಭೆ, ಹಾತಲಗೇರಿ, ಗ್ರಾಮ ಪಂಚಾಯಿತಿ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಒಂದು ವಾರದಿಂದ ಜರುಗಿದ ಪ್ರಸಾದವನ್ನು ಸ್ವಯಂ ಪ್ರೇರಣೆಯಇಂದ ಸಿದ್ಧಗೊಳಿಸಿದ್ದ ಚಿದಾನಂದ ಖಾಕಿ ಅವರುಗಳಿಗೆ ಟ್ರಸ್ಟ್ ಕಾರ್ಯದರ್ಶಿ ಗಣೇಶಸಿಂಗ್ ಬ್ಯಾಳಿ ಅಭಿನಂದಿಸಿದ್ದಾರೆ.



