HomeCrime Newsಬಲೂನ್ ಮಾರುವ ಬಾಲಕಿ ಅತ್ಯಾಚಾರ, ಕೊಲೆ: ಆರೋಪಿಗೆ ಪೊಲೀಸ್ ಗುಂಡೇಟು

ಬಲೂನ್ ಮಾರುವ ಬಾಲಕಿ ಅತ್ಯಾಚಾರ, ಕೊಲೆ: ಆರೋಪಿಗೆ ಪೊಲೀಸ್ ಗುಂಡೇಟು

For Dai;y Updates Join Our whatsapp Group

Spread the love

ಮೈಸೂರು: ಮೈಸೂರು ದಸರಾ ಸಂಭ್ರಮದ ನಡುವೆ ನಡೆದ ಪೈಶಾಚಿಕ ಘಟನೆಗೆ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಕುಟುಂಬದ ಜೊತೆ ಮೈಸೂರು ದಸರಾ ಹಬ್ಬದ ವೇಳೆ ಬಲೂನು ಮಾರಾಟ ಮಾಡಲು ಬಂದಿದ್ದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಯಾಗಿದ್ದು,

ಈ ಸಂಬಂಧ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ತಪ್ಪಿಸಿಕೊಳ್ಳಲು ಯತ್ನಿಸಿದ ಕೀಚಕನಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.  ದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಕಾರ್ತಿಕ್​ನನ್ನು ಕೊಳ್ಳೇಗಾಲದಲ್ಲಿ ವಶಕ್ಕೆ ಪಡೆದಿದ್ದ ಪೊಲೀಸರು, ಮೈಸೂರಿಗೆ ಕರೆದುಕೊಂಡು ಬಂದು ಪ್ರಾಥಮಿಕ ವಿಚಾರಣೆ ನಡೆಸಿದ್ದರು.

ಬಳಿಕ ಹೆಚ್ಚಿನ ವಿಚಾರಣೆಗಾಗಿ ಪುನಃ ಈತನ ಊರಾದ ಸಿದ್ದಲಿಂಗಪುರಕ್ಕೆ ಕರೆದುಕೊಂಡು ಹೋಗಿ ವಾಪಸ್ ಬರುತ್ತಿದ್ದರು. ಈ ವೇಳೆ ಮೇಟಗಳ್ಳಿ ಬಳಿ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟು ತಗುಲಿದ ನಂತರ,

ಆರೋಪಿ ಕಾರ್ತಿಕ್‌ನನ್ನು ತಕ್ಷಣವೇ ಕೆ.ಆರ್‌. ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕಾರ್ಯಾಚರಣೆಯ ವೇಳೆ ಇಬ್ಬರು ಪೊಲೀಸರಿಗೂ ಗಾಯಗಳಾಗಿವೆ. ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಭೇಟಿ ಮಾಹಿತಿ ಪಡೆದುಕೊಂಡರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!