ಬೀದರ್:- ಅತ್ಯಾಚಾರ ಆರೋಪ ಕೇಸ್ ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
Advertisement
ಬೀದರ್ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪ್ರತೀಕ್ ಚೌಹಾಣ್ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು. ವಾದ-ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, 2 ಲಕ್ಷ ರೂ. ಬಾಂಡ್ ಶ್ಯೂರಿಟಿ ಹಾಗೂ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿದೆ. ಜೊತೆಗೆ ಪೊಲೀಸರು ಪ್ರಭು ಚೌಹಾಣ್ ಪುತ್ರನನ್ನು ಬಂಧನ ಮಾಡುವಂತಿಲ್ಲ ಎಂದು ಸೂಚನೆ ಕೊಟ್ಟಿದೆ.
ಇನ್ನೂ ಈಗಾಗಲೇ ಬೀದರ್ನ ಮಹಿಳಾ ಠಾಣೆಯಿಂದ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಅತ್ಯಾಚಾರ ಕೇಸ್ ವರ್ಗಾವಣೆ ಮಾಡಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.


