ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗೋದು ಖಚಿತ: ಬಿ.ವೈ.ವಿಜಯೇಂದ್ರ!

0
Spread the love

ಬೆಂಗಳೂರು:- ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗೋದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

Advertisement

ಈ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಗಾದಿಗೆ ಪೈಪೋಟಿ ನಡೆಯುತ್ತಿದ್ದು, ದಿನೇದಿನೇ ಅದು ದೊಡ್ಡದಾಗುತ್ತಿದೆ. ಸಿದ್ದರಾಮಯ್ಯರ ಪರ, ಡಿಕೆ ಶಿವಕುಮಾರ್ ಪರ-ವಿರುದ್ಧ ಹೇಳಿಕೆಗಳನ್ನು ಶಾಸಕರು ಕೊಡುತ್ತಿದ್ದಾರೆ. ನಿಶ್ಚಿತವಾಗಿ ಬರುವ ದಿನಗಳಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ಸಿನ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಕಾಂಗ್ರೆಸ್ ಶಾಸಕರು, ಡಿಕೆಶಿ ಮುಖ್ಯಮಂತ್ರಿ ಆಗುವ ಕುರಿತು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಗುರುಗಳು ಹೇಳಿದ್ದನ್ನು ನೆನಪು ಮಾಡಿಕೊಂಡಿದ್ದರು. ಅಧಿಕಾರ ಸಿಗದೇ ಇದ್ದಲ್ಲಿ ಅದನ್ನು ಒದ್ದು ಕಿತ್ತುಕೊಳ್ಳಬೇಕೆಂದು ಡಿಕೆಶಿಗೆ ಅವರ ಗುರುಗಳು ಹೇಳಿದ್ದರಂತೆ ಎಂದು ಗಮನ ಸೆಳೆದರು.


Spread the love

LEAVE A REPLY

Please enter your comment!
Please enter your name here