ದೆಹಲಿ: ತೆಲುಗು ಚಿತ್ರರಂಗದ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರನಲ್ಲಿ ಐಶಾರಾಮಿ ITC ರೆಸಾರ್ಟ್ನಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.
ವಿವಾಹವಾದ ಮರುದಿನವೇ ನವ ದಂಪತಿ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಮದುವೆಗೆ ಮುನ್ನವೇ ಮೋದಿ ಅವರು ಪತ್ರ ಮುಖೇನ ಶುಭಾಶಯ ಕೋರಿದ್ದರೆಂದು ತಿಳಿದುಬಂದಿದೆ. ವಿಜಯ್ ಅವರ ತಂದೆ ಕಳುಹಿಸಿದ್ದ ಆಹ್ವಾನ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ, ವಧು-ವರರಿಗೆ ಶುಭಹಾರೈಕೆಗಳನ್ನು ತಿಳಿಸಿದ್ದರು.
ಇದೀಗ ದೆಹಲಿಯಲ್ಲಿ ಪ್ರಧಾನಿಯನ್ನು ಭೇಟಿ ಮಾಡಿದ ರಶ್ಮಿಕಾ ಮತ್ತು ವಿಜಯ್, ಮಾರ್ಚ್ 4ರಂದು ಹೈದರಾಬಾದ್ನಲ್ಲಿ ನಡೆಯಲಿರುವ ಆರತಕ್ಷತೆ ಸಮಾರಂಭಕ್ಕೆ ಖುದ್ದಾಗಿ ಆಹ್ವಾನಿಸಿದ್ದಾರೆ.
ಮದುವೆ ಸಮಾರಂಭ ರಾಜಸ್ಥಾನದಲ್ಲಿ ನೆರವೇರಿದರೆ, ಆರತಕ್ಷತೆ ಕಾರ್ಯಕ್ರಮದಲ್ಲಿ ರಾಜಕೀಯ ಮತ್ತು ಚಿತ್ರರಂಗದ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.



