ವಿಜಯಸಾಕ್ಷಿ ಸುದ್ದಿ, ಗದಗ: ಸ್ಥಳೀಯ ಬಸವೇಶ್ವರ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಂ. 4ರಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ರತ್ನಾ ಕುಮಾರಿ ಎಫ್.ಶಿಂಗಾಡಿಯವರಿಗೆ ರಾಜ್ಯ ಮಟ್ಟದ ಆದರ್ಶ ಉಪಾಧ್ಯಾಯರು ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಲಬುರ್ಗಿ ರಂಗಮಂದಿರದಲ್ಲಿ ಆಧುನಿಕ ಭಾರತದ ಅಕ್ಷರದ ಅವ್ವ ಸಾವಿತ್ರಿ ಬಾಯಿ ಫುಲೆ, ಮುಸ್ಲಿಮ್ ಧರ್ಮದ ಮೊದಲ ಶಿಕ್ಷಕಿ ಫಾತಿಮಾ ಶೇಖ್ ಅವರ ಜನ್ಮದಿನಾಚರಣೆಯ ನಿಮಿತ್ತ ಸಮಗ್ರ ಕರ್ನಾಟಕ ಉಪಾಧ್ಯಾಯರ ಪ್ರಗತಿಪರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಯಿತು.
ಫಾದರ್ ಜೋಸೆಫ್ ಸಾನ್ನಿಧ್ಯದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ದಾಕ್ಷಾಯಿಣಿ ಎಸ್.ಅಪ್ಪ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಡಾ. ಅಜಯ್ ಸಿಂಗ್, ಬಸವರಾಜ್ ಜೆ. ಮತ್ತಿಮೂಡ, ಮಹಾಪೌರರಾದ ವರ್ಷಾ ಆರ್.ಜಾನೆ, ರಾಜ್ಯಾಧ್ಯಕ್ಷ ಗುರುಪಾದ ಕೂಗನೂರ್, ಕೋಶಾಧ್ಯಕ್ಷ ಝಕೀರ್ ಹುಸೇನ್ ಕೂಪನೂರ್ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಿಕ್ಷಕಿ ರತ್ನಾ ಅವರ ಸೇವೆ ಸ್ಮರಿಸಿ ಶುಭ ಕೋರಿದರು.



