ವಿಜಯಸಾಕ್ಷಿ : ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ 595 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಲಕ್ಷ್ಮೇಶ್ವರ ತಾಲೂಕಿನ ಆದ್ರಳ್ಳಿ ಗ್ರಾಮದ ಬಡ ವಿದ್ಯಾರ್ಥಿನಿ ರವಿನಾ ಲಮಾಣಿಯವರನ್ನು ಆದ್ರಳ್ಳಿ ಗವಿಸಿದ್ದೇಶ್ವರ ಮಠದ ಶ್ರೀ ಕುಮಾರ ಮಹಾರಾಜ ಶ್ರೀಗಳು ಸನ್ಮಾನಿದರು. ತಾಂಡಾ ಪ್ರದೇಶದ ವಿದ್ಯಾರ್ಥಿನಿಯನ್ನು ಶಾಸಕ ಡಾ. ಚಂದ್ರು ಲಮಾಣಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದ ಗಡ್ಡದೇವರಮಠ ಸೇರಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಸನ್ಮಾನಿಸಿ, ಮುಂದಿನ ಶಿಕ್ಷಣಕ್ಕೆ ಪ್ರೋತ್ಸಾಹ-ಭರವಸೆ ನೀಡಿದ್ದಾರೆ.
Advertisement