RCB ಅಭಿಮಾನಿಗಳೇ, ಶ್ರೇಯಸ್ ಆ ರೀತಿ ಮಾಡಿಲ್ಲ.. ಆದ್ರೂ ಕಿರಿಕ್ ಕೊಹ್ಲಿ ಮಿತಿಮೀರಿದ್ದೇಕೆ?

0
Spread the love

IPL 37ನೇ ಪಂದ್ಯವು ಆಟಗಾರರ ನಡುವಣ ಕಿತ್ತಾಟಕ್ಕೆ ಸಾಕ್ಷಿಯಾಗಿದೆ. ಮೊದಲಿಗೆ ವಿರಾಟ್ ಕೊಹ್ಲಿ ಹಾಗೂ ಪಂಜಾಬ್ ಕಿಂಗ್ಸ್ ಸ್ಪಿನ್ನರ್ ಹರ್​ಪ್ರೀತ್ ಬ್ರಾರ್ ಮಾತಿನ ಚಕಮಕಿ ನಡೆಸಿದರೆ, ಆ ಬಳಿಕ ಶ್ರೇಯಸ್ ಅಯ್ಯರ್ ಹಾಗೂ ಕಿಂಗ್ ಕೊಹ್ಲಿ ಕಿತ್ತಾಡಿಕೊಂಡಿದ್ದರು.

Advertisement

ಹೌದು, ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ವಿಕೆಟ್​ಗಳ ಜಯ ಸಾಧಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 157 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡದ ಪರ ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 73 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಆರ್​ಸಿಬಿ ತಂಡ 18.5 ಓವರ್​ಗಳಲ್ಲಿ 159 ರನ್​ ಬಾರಿಸಿ 7 ವಿಕೆಟ್​ಗಳ ಗೆಲುವು ದಾಖಲಿಸಿತು.

ಈ ಗೆಲುವಿನ ಬಳಿಕ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಕಿಚಾಯಿಸುವಂತೆ ಸಂಭ್ರಮಿಸಿದ್ದರು. ಇದು ಶ್ರೇಯಸ್ ಅಯ್ಯರ್ ಅವರ ಸೌಂಡ್ ಸೆಲೆಬ್ರೇಷನ್​ಗೆ ರಿಯಾಕ್ಷನ್ ಎಂದು ನೀವಂದುಕೊಂಡರೆ ನಿಮ್ಮ ಊಹೆ ತಪ್ಪು. ಏಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ವಿರುದ್ಧ ಗೆದ್ದ ಬಳಿಕ ಶ್ರೇಯಸ್ ಅಯ್ಯರ್ RCB RCB… ಎಂಬ ನಿಮ್ಮ ಶಬ್ದ ಕೇಳಿಸುತ್ತಿಲ್ಲ ಎಂದು ಶ್ರೇಯಸ್ ಅಯ್ಯರ್ ಯಾವುದೇ ಸನ್ನೆ ಮಾಡಿರಲಿಲ್ಲ. ಬದಲಾಗಿ ಮುಲ್ಲನ್​ಪುರ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆದ್ದ ಬಳಿಕ ಶ್ರೇಯಸ್ ಅಯ್ಯರ್ ಮಾಡಿದ ಸನ್ನೆಯನ್ನೇ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ.

ಕೆಕೆಆರ್ ವಿರುದ್ಧ ಗೆದ್ದ ಬಳಿಕ ಶ್ರೇಯಸ್ ಅಯ್ಯರ್, ಪಂಜಾಬ್ ಕಿಂಗ್ಸ್ ಅಭಿಮಾನಿಗಳಿಗೆ ಸೌಂಡ್​ ಕೇಳಿಸುತ್ತಿಲ್ಲ. ಮತ್ತಷ್ಟು ಜೋರಾಗಿ ಕೂಗಿ ಎಂದಷ್ಟೇ ಸನ್ನೆ ಮಾಡಿದ್ದರು. ಈ ವಿಡಿಯೋವನ್ನು ಎಡಿಟ್ ಮಾಡಿ, ಬೆಂಗಳೂರಿನಲ್ಲಿ ಆರ್​ಸಿಬಿ ಅಭಿಮಾನಿಗಳನ್ನು ಶ್ರೇಯಸ್ ಅಯ್ಯರ್ ಕಿಚಾಯಿಸಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.

ಇದನ್ನೇ ನಂಬಿರುವ ಬಹುತೇಕ ಆರ್​ಸಿಬಿ ಅಭಿಮಾನಿಗಳು ಇದೀಗ ಶ್ರೇಯಸ್ ಅಯ್ಯರ್ ವರ್ತನೆಗೆ ವಿರಾಟ್ ಕೊಹ್ಲಿ ತಿರುಗೇಟು ನೀಡಿದ್ದಾರೆ ಎಂದು ಪ್ರತಿಕ್ರಿಯಿಸುತ್ತಿದ್ದಾರೆ. ಆದರೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಆರ್​ಸಿಬಿ ಅಭಿಮಾನಿಗಳನ್ನು ಕಿಚಾಯಿಸಿಲ್ಲ ಎಂಬುದೇ ಸತ್ಯ. ಇದಾಗ್ಯೂ ವಿರಾಟ್ ಕೊಹ್ಲಿ ಶ್ರೇಯಸ್ ಅಯ್ಯರ್ ಅವರನ್ನು ಟಾರ್ಗೆಟ್ ಮಾಡಿದ್ದೇಕೆ ಎಂಬುದೇ ಈಗ ಪ್ರಶ್ನೆಯಾಗಿದೆ.


Spread the love

LEAVE A REPLY

Please enter your comment!
Please enter your name here