ನಾಳೆ ಆರ್ ಸಿಬಿ-ಪಂಜಾಬ್ ಬಿಗ್ ಫೈಟ್: ತವರಲ್ಲಿ ಗೆಲ್ಲಬೇಕಂದ್ರೆ ಬೆಂಗಳೂರು ಈ ಕೆಲಸ ಮಾಡಲೇಬೇಕು!?

0
Spread the love

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ಅಂದ್ರೆ ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದೆ. ಹೋಮ್​​ಗ್ರೌಂಡ್​ನಲ್ಲಿ ಮೊದಲ ಗೆಲುವಿನ ಹುಡುಕಾಟದಲ್ಲಿರೋ ಆರ್​​ಸಿಬಿ, ಪಂಜಾಬ್​ ಕಿಂಗ್​ ಮಣಿಸುವ ಕನಸಿನಲ್ಲಿದೆ.

Advertisement

ಪಂಜಾಬ್ ಪರ ಆರಂಭಿಕನಾಗಿ ಕಣಕ್ಕಿಳಿಯೋ ಯುವ ಎಡಗೈ ಬ್ಯಾಟರ್ ಪ್ರಿಯಾಂಶ್​, ಮೊದಲ ಬಾಲ್​ನಿಂದಲೇ ಬೌಲರ್​ಗಳ ಮೇಲೆ ದಂಡಯಾತ್ರೆ ನಡೆಸ್ತಾರೆ. ಪಂಜಾಬ್ ಸಕ್ಸಸ್​ ಸಿಕ್ರೇಟ್​ ಆಗಿರುವ ಈ ಡೆಲ್ಲಿ ಬಾಯ್, 6 ಪಂದ್ಯಗಳಿಂದ 216ರ ಬ್ಯಾಟಿಂಗ್ ಸ್ಟ್ರೈಕ್​​ರೇಟ್​ನಲ್ಲಿ 216 ರನ್ ಸಿಡಿಸಿದ್ದಾರೆ.

ಅಷ್ಟ ದಿಕ್ಕುಗಳಿಗೂ ಚೆಂಡಿನ ದರ್ಶನ ಮಾಡಿಸೋ ಈತನಿಗೆ, ಚಿನ್ನಸ್ವಾಮಿಯ ಚಿಕ್ಕ ಗ್ರೌಂಡ್​ ನಿಜಕ್ಕೂ ಹೇಳಿ ಮಾಡಿಸಿದಂತಿದೆ. ಅಕಸ್ಮಾತ್ ಇಲ್ಲಿ ಪ್ರಿಯಾಂಶ್ ಸಿಡಿದು ನಿಂತ್ರೆ, ಆರ್​ಸಿಬಿಗೆ ಸಂಕಷ್ಟ ತಪ್ಪಿದ್ದಲ್ಲ. ಹೀಗಾಗಿ ಈತನಿಗೆ ಆರಂಭದಲ್ಲೇ ಪೆವಿಲಿಯನ್ ಹಾದಿ ತೋರಿಬೇಕಿದೆ. ಈ ನಿಟ್ಟಿನಲ್ಲಿ ಗೇಮ್​​ಪ್ಲಾನ್​ ಮಾಡಬೇಕಿದೆ.

ಈ ಬಾರಿಯ ಮೆಗಾ ಹರಾಜಿನಲ್ಲಿ ಪ್ರಿಯಾಂಶು ಆರ್ಯ ಅವರನ್ನು ಪಂಜಾಬ್ ಕಿಂಗ್ಸ್​ ಖರೀದಿಸಿದೆ. ದೇಸಿಯ ಕ್ರಿಕೆಟ್​ನಲ್ಲಿ ಇವರ ಆರ್ಭಟ ಗಮನಿಸಿದ್ದ ಪ್ರೀತಿ ಜಿಂಟಾ, ಬರೋಬ್ಬರಿ 3.80 ಕೋಟಿ ರೂಪಾಯಿಗೆ ಖರೀದಿ ಮಾಡಿದೆ.


Spread the love

LEAVE A REPLY

Please enter your comment!
Please enter your name here