IPL 2025: ಬೆಂಗಳೂರಿನಲ್ಲಿ RCBಗೆ ಮೊದಲ ಗೆಲುವು: ತಂಡದ ಗೆಲುವಿನ ಬಗ್ಗೆ ಕ್ಯಾಪ್ಟನ್ ರಜತ್ ಹೇಳಿದ್ದೇನು..?

0
Spread the love

ಬೆಂಗಳೂರು: ತವರಿನಲ್ಲಿ ಒಂದು ಗೆಲುವಿಗಾಗಿ ಕಾದು ಕುಳಿತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಐಪಿಎಲ್ 2025 ರ 42ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಿಸಿದ್ದ ಆರ್​ಸಿಬಿ ಕೊನೆಗೂ ತನ್ನ ತವರು ಮೈದಾನದಲ್ಲಿ ಗೆಲುವಿನ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ.

Advertisement

ಈ ಮೊದಲು ಈ ಸೀಸನ್​ನಲ್ಲಿ 3 ತವರು ಪಂದ್ಯಗಳನ್ನು ಆಡಿದ್ದ ಆರ್​ಸಿಬಿ ಮೂರೂ ಪಂದ್ಯಗಳನ್ನು ಸೋತಿತ್ತು. ಆದರೆ ರಾಜಸ್ಥಾನ್ ವಿರುದ್ಧ ಸಾಂಘಿಕ ಹೋರಾಟ ನೀಡಿದ ಆರ್​ಸಿಬಿ ತವರಿನಲ್ಲಿ ಆಡಿದ 4ನೇ ಪಂದ್ಯದಲ್ಲಿ 11 ರನ್​​ಗಳ ರೋಚಕ ಜಯ ಸಾಧಿಸಿತು.

ಇನ್ನೂ ಪಂದ್ಯ ಗೆದ್ದ ಖುಷಿಯಲ್ಲಿ ಮಾತನಾಡಿರುವ ಕ್ಯಾಪ್ಟನ್ ರಜತ್ ಪಾಟೀದಾರ್, ಈ ಗೆಲುವು ನಮಗೆ ತುಂಬಾ ಅಗತ್ಯವಾಗಿತ್ತು. ಇಂದು ವಿಕೆಟ್ ವಿಭಿನ್ನವಾಗಿತ್ತು. 10ನೇ ಓವರ್ ನಂತರ ನಮ್ಮ ಬೌಲರ್​ಗಳು ಕಂಟ್ರೋಲ್​ಗೆ ತಂದರು. ಗೆಲುವಿನ ಕ್ರೆಡಿಟ್ ಬೌಲರ್‌ಗಳಿಗೆ ಸಲ್ಲುತ್ತದೆ. ಅವರು ಧೈರ್ಯ ಅದ್ಭುತವಾಗಿತ್ತು.

ರಾಜಸ್ಥಾನ್ ರಾಯಲ್ಸ್​, ಆರಂಭದಲ್ಲಿ ಚೆನ್ನಾಗಿ ಬ್ಯಾಟಿಂಗ್ ಮಾಡಿದರು. ನಾವು ವಿಕೆಟ್‌ಗಳನ್ನು ಹುಡುಕುತ್ತಿದ್ದೆವು. ವಿಕೆಟ್ ಬಿದ್ದಾಗ ಮಾತ್ರ ರನ್​​ ಓಟಕ್ಕೆ ಬ್ರೇಕ್ ಹಾಕಬಹುದು. ನಮ್ಮಲ್ಲಿ ಉತ್ತಮ ನಾಯಕರ ತಂಡವಿದೆ. ಅವರ ಇನ್‌ಪುಟ್‌ಗಳು ಬಹಳಷ್ಟು ಸಹಾಯ ಮಾಡುತ್ತವೆ ಎಂದರು.

 

 


Spread the love

LEAVE A REPLY

Please enter your comment!
Please enter your name here