ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭರದ ಸಿದ್ದತೆ: ಗಜಪಡೆಗೆ ಎರಡನೇ ಹಂತದ ತಾಲೀಮು

0
Spread the love

ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕೌಂಟ್ ಡೌನ್ ಶುರು ಹಿನ್ನೆಲೆ ಗಜಪಯಣ ಮೂಲಕ ಕಾಡಿನಿಂದ ನಾಡಿಗೆ ಬಂದಿರುವ ದಸಾರ ಗಜಪಡೆಗಳು ಅರಮನೆಯಲ್ಲಿ ವಾಸ್ತವ್ಯ ಹೂಡಿದ್ದು ಜಂಬೂ ಸವಾರಿಗೆ ಭರ್ಜರಿ ತಾಲೀಮು ನಡೆಸಲಾಗುತ್ತಿವೆ. ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಇಂದು ಮರಳು ಮೂಟೆ ಹೊರಿಸುವ ಮೂಲಕ ಜಂಬೂ ಸವಾರಿಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

Advertisement

ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಲಕ್ಷ್ಮೀ ಹಾಗೂ ವರಲಕ್ಷ್ಮೀ ಆನೆಗಳಿಗೆ ಸಾಂಕೇತಿಕವಾಗಿ ಡಿಸಿಎಫ್ ಡಾ.ಐ.ಬಿ ಪ್ರಭುಗೌಡ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು. ಇದರೊಂದಿಗೆ ಗಜಪಡೆಗೆ ವಾಕಿಂಗ್ ಮಾಡಿಸಲಾಗುತ್ತದೆ. ಅರಮನೆಯಿಂದ ಸಯ್ಯಾಜೀರಾವ್ ರಸ್ತೆ,

ಆಯುವೇರ್ದಿಕ್ ವೃತ್ತದ ಮೂಲಕ ಜಂಬೂ ಬಜಾರ್ ತಲುಪಿ ಹೈವೇ ಸರ್ಕಲ್ ಮೂಲಕ ದಸರಾ ಗಜಪಡೆ ಬನ್ನಿಮಂಟಪ ತಲುಪಲಿವೆ. ಅರಮನೆಯಿಂದ ಬನ್ನಿಮಂಟಪದವರೆಗೆ 5 ಕಿ.ಮೀ ತಾಲೀಮು ನಡೆಯಲಿದೆ. ಜಂಬೂಸವಾರಿಯ ದಿನ ಯಾವುದೇ ತೊಂದರೆಯಾಗದಿರಲಿ ಎಂದು ತಾಲೀಮು ನಡೆಸಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here