ಮೈಸೂರು:- ಹಣಕ್ಕಾಗಿ ಮೈಸೂರು ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿ 30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಶ್ವಿಯಾಗಿದ್ದಾರೆ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಉದ್ಯಮಿ, ಲೋಕೇಶ್ ಎಂಬವರನ್ನು, ಟಾಟಾ ಸುಮೋದಲ್ಲಿ ಬಂದ ಐದು ಮಂದಿ ಅಪಹರಣ ಮಾಡಿದ್ದರು. ಬಳಿಕ ಲೋಕೇಶ್ ಮೊಬೈಲ್ನಿಂದ ಅವರ ಪತ್ನಿಗೆ ಕರೆ ಮಾಡಿ ಆರೋಪಿಗಳು 30 ಲಕ್ಷ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು.
ಗಾಬರಿಗೊಂಡ ಲೋಕೇಶ್ ಪತ್ನಿ ವಿಜಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲರ್ಟ್ ಆದ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಮೈಸೂರಿನಿಂದ 50 ಕಿ.ಮೀ. ದೂರದಲ್ಲಿ ಆರೋಪಿಗಳನ್ನು ಬಂಧಿಸಿ, ಅಪಹರಣವಾದ ಲೋಕೇಶ್ ಅವರನ್ನು ವಶಕ್ಕೆ ಪಡೆದಿದ್ದಾರೆ.



