ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಬೈಪಾಸ್ ಮೂಲಕ ಸಂಚರಿಸುವ ವಿಶೇಷ ರೈಲುಗಳು ಗದಗ ಮೇನ್ ಜಂಕ್ಷನ್ ಮೂಲಕ ಸಂಚಾರ ಮಾಡುವಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು ಎಂದು ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪುರ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರಲ್ಲಿ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ನೂತನ ರೈಲು ಮಾರ್ಗದ ಗದಗ-ಯಲವಗಿ, ಗದಗ ಬಿಂಕದಕಟ್ಟಿ, ಹರ್ತಿ-ಮಾಗಡಿ-ಶಿರಹಟ್ಟಿ ಮಾರ್ಗದ ಮೂಲಕ ಲಕ್ಷ್ಮೇಶ್ವರ ಮೂಲಕ ಯಲವಗಿ ತಲುಪುವ ಈ ಮಾರ್ಗ 58 ಕಿಲೋಮೀಟರ್ ದೂರದಲ್ಲಿದೆ. ಈ ಮಾರ್ಗದಲ್ಲಿ ಭೂಸ್ವಾಧೀನದ ಜಮೀನುಗಳಲ್ಲಿ ಯಾವುದೇ ಬೆಳೆಗಳನ್ನು ಬೆಳೆಯುತ್ತಿಲ್ಲ. ಭೂಮಿ ಸ್ವಾಧೀನಪಡಿಸಲು ಉಳಿದ ಹಣವನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಲು ವಿನಂತಿಸಿಕೊಂಡರು.
ಈ ಮಾರ್ಗ ಪೂರ್ಣ ಆದರೆ ಶಿರಹಟ್ಟಿ, ಲಕ್ಷೇಶ್ವರ ಭಾಗದ ರೈತರಿಗೆ ಹಾಗೂ ವ್ಯಾಪಾರಸ್ಥರಿಗೆ ಅನುಕೂಲ ಆಗಲಿದೆ. ಮುಂಬರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮುಂಗಡ ಪತ್ರದಲ್ಲಿ ಈ ಯೋಜನೆಗಳ ಸಲುವಾಗಿ ಹಣವನ್ನು ಮೀಸಲು ಇಡಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.



