HomeIndia Newsತೆಲಂಗಾಣ ಹೈಕೋರ್ಟ್’ನಿಂದ ಜನಾರ್ದನ ರೆಡ್ಡಿಗೆ ರಿಲೀಫ್! ಜಾಮೀನು ಮಂಜೂರು

ತೆಲಂಗಾಣ ಹೈಕೋರ್ಟ್’ನಿಂದ ಜನಾರ್ದನ ರೆಡ್ಡಿಗೆ ರಿಲೀಫ್! ಜಾಮೀನು ಮಂಜೂರು

For Dai;y Updates Join Our whatsapp Group

Spread the love

ಹೈದರಾಬಾದ್:‌ ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಸಿಬಿಐ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಹಲವು ಷರತ್ತುಗಳನ್ನ ವಿಧಿಸಿ ಜಾಮೀನು ನೀಡಿದೆ. 10 ಲಕ್ಷ ರೂಪಾಯಿ ಮೌಲ್ಯದ 2 ಶ್ಯೂರಿಟಿ ನೀಡಲು ಸೂಚಿಸಿದೆ. ಜೊತೆಗೆ ಭಾರತ ಬಿಟ್ಟು ಹೋಗಲು ಜನಾರ್ದನ ರೆಡ್ಡಿ ಅನುಮತಿ ಇಲ್ಲ. ಪಾಸ್​ಪೋರ್ಟ್ ವಶಕ್ಕೆ ಪಡೆಯಲು ಕೋರ್ಟ್​ ಸೂಚನೆ ನೀಡಿದೆ.

ಓಬಳಾಪುರಂ ಮೈನಿಂಗ್ ಕಂಪನಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳ ಕುರಿತು ತೆಲಂಗಾಣ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿಗಳಾದ ಗಾಲಿ ಜನಾರ್ದನ ರೆಡ್ಡಿ, ಬಿ.ವಿ. ಶ್ರೀನಿವಾಸ ರೆಡ್ಡಿ, ವಿ.ಡಿ. ರಾಜಗೋಪಾಲ್ ಮತ್ತು ಅಲಿ ಖಾನ್ ಸಲ್ಲಿಸಿರುವ ಜಾಮೀನು ಅರ್ಜಿಗಳ ಜೊತೆಗೆ ಗಾಲಿ ಜನಾರ್ದನ ರೆಡ್ಡಿ ಪ್ರತ್ಯೇಕವಾಗಿ ಸಲ್ಲಿಸಿರುವ ಜೈಲು ಶಿಕ್ಷೆಯ ಅರ್ಜಿಗಳ ಮೇಲಿನ ಶಿಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ.

ಹೈದರಾಬಾದ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.  ಸುಮಾರು 16 ವರ್ಷಗಳ ಹಿಂದೆ ಈ ಪ್ರಕರಣವನ್ನು ಸಿಬಿಐ ದಾಖಲಿಸಿತ್ತು. ಪ್ರಕರಣ ದಾಖಲಾಗುವ ಸಮಯದಲ್ಲಿ ಆಂಧ್ರಪ್ರದೇಶ ಗೃಹ ಸಚಿವೆಯಾಗಿದ್ದ ಸಬಿತಾ ಇಂದ್ರಾ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ ಕೃಪಾನಂದಂ ವಿರುದ್ಧದ ಆರೋಪಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿತ್ತು.

ಏನಿದು ಪ್ರಕರಣ?

ಆಂಧ್ರ ಪ್ರದೇಶದಲ್ಲಿ ವೈ.ಎಸ್‌ ರಾಜಶೇಖರರೆಡ್ಡಿ ಹಾಗೂ ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಓಬಳಾಪುರಂ ಅಕ್ರಮ ಗಣಿಕಾರಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಆಂಧ್ರ-ಕರ್ನಾಟಕದ ಗಡಿಗೆ ಹೊಂದಿಕೊಂಡ ಓಬಳಾಪುರಂ ಬೆಟ್ಟದಲ್ಲಿ ಅದಿರಿನ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಆರೋಪಿಸಲಾಗಿತ್ತು. ಗಣಿ‌ಗಾರಿಕೆ ಮಂಜೂರಾತಿ ವೇಳೆ ಇಲಾಖೆಗಳಿಂದ ಅಕ್ರಮವಾಗಿದೆ. ಅರಣ್ಯ ಇಲಾಖೆ, ಗಣಿ‌ ಇಲಾಖೆಯಿಂದ ಅಕ್ರಮ‌ ಆಗಿದೆ ಎಂದು ಆರೋಪಿಸಲಾಗಿತ್ತು.

ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 884 ಕೋಟಿ ಅಕ್ರಮ ಎಸಗಿರೋದು ಸಾಬೀತಾಗಿದೆ. ಒಟ್ಟು 29 ಲಕ್ಷ ಟನ್ ಅದಿರು ಲೂಟಿ ಆಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐನ ವಿಶೇಷ ಕೋರ್ಟ್, ಶ್ರೀನಿವಾಸರೆಡ್ಡಿ, ಜನಾರ್ದನರೆಡ್ಡಿ, ಅಲಿಖಾನ್, ಸಬಿತಾ ಇಂದ್ರಾರೆಡ್ಡಿ, ಕೃಪಾನಂದ ದೋಷಿಗಳು ಎಂದು ಹೇಳಿತ್ತು. ಶಿಕ್ಷೆಯ ಪ್ರಮಾಣವಾಗಿ 5 ಅಪರಾಧಿಗಳಿಗೆ ತಲಾ 7 ವರ್ಷ ಜೈಲು ಶಿಕ್ಷೆ ಪ್ರಕಟ ಮಾಡಿತ್ತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!