ಬೆಂಗಳೂರು: ಧಾರವಾಡ ಜಿಲ್ಲಾಧಿಕಾರಿಗಳ ನಿರ್ಬಂಧದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು ರದ್ದು ಮಾಡಿದ್ದು, ಕನ್ನೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳಿಗೆ ಧಾರವಾಡ ಜಿಲ್ಲೆಯಲ್ಲಿ ಪ್ರವೇಶಕ್ಕೆ ಅನುಮತಿ ನೀಡಿದೆ. ಕಳೆದ ನವೆಂಬರ್ 7ರಂದು ಅಣ್ಣಿಗೇರಿ ತಾಲ್ಲೂಕಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಿಂಗಾಯತ ಸಮುದಾಯವನ್ನು ಅವಮಾನಿಸಿದ ಆರೋಪದ ಹಿನ್ನೆಲೆಯಲ್ಲಿ,
ಲಿಂಗಾಯತ ಸಂಘಟನೆಗಳು ಶ್ರೀಗಳಿಗೆ ಧಾರವಾಡ ಪ್ರವೇಶ ನಿರಾಕರಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು.ಈ ಮನವಿ ಪರಿಶೀಲಿಸಿದ ಕನೇರಿ ಸ್ವಾಮೀಜಿಗೆ ಧಾರವಾಡ ಜಿಲ್ಲೆಗೆ ಆಗಮಿಸಲು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ನೀಡಿದ್ದರು.
ಇದೀಗ ಈ ಪ್ರಕರಣ ಸಂಬಂಧ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರಾಕರಿಸಿದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಧಾರವಾಡ ಫೀಠ ತಡೆ ನೀಡಿದೆ. ಧಾರವಾಡ ಪ್ರವೇಶ ನಿರ್ಬಂಧ ಆದೇಶ ತೆರವುಗೊಳಿಸಿದೆ. ಕಳೆದ ನವೆಬಂರ್ 7 ರಂದು ಅಣ್ಣಿಗೇರಿ ತಾಲೂಕಿನಲ್ಲಿ ಕಣ್ಣೀರಿ ಶ್ರೀಗಳಿಗೆ ಕಾರ್ಯಕ್ರಮವೊಂದಕ್ಕೆ ಆಹ್ವಾನ ನೀಡಲಾಗಿತ್ತು. ಆದರೆ, ಲಿಂಗಾಯತ ಸಮುದಾಯಕ್ಕೆ ಕಣ್ಣೀರಿ ಶ್ರೀಗಳು ಅವಮಾನಿಸಿದ್ದಾರೆ ಹೀಗಾಗಿ ಅವರಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಲಿಂಗಾಯತ ಸಂಘಟನೆಗಳು ಧಾರವಾಡ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದವು.
ಹೀಗಾಗಿ ಜಿಲ್ಲಾಧಿಕಾರಿಗಳು ಕನ್ನೇರಿ ಶ್ರೀಗಳಿಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದರು. ಜಿಲ್ಲಾಧಿಕಾರಿಗಳ ಈ ಆದೇಶ ಪ್ರಶ್ನಿಸಿ ಶ್ರೀಗಳು ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್, ಜಿಲ್ಲಾಧಿಕಾರಿಗಳು ಹೊರಡಿಸಿದ್ದ ನಿರ್ಬಂಧ ತೆರವುಗೊಳಿಸಿ ಆದೇಶಿಸಿದೆ. ಆ ಮೂಲಕ ಕಣ್ಣೀರಿ ಶ್ರೀಗಳ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಿದೆ. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ನಿರ್ಬಂಧ ಆದೇಶ ತೆರವುಗೊಳಿಸಿದೆ.



