ವಿಜಯಸಾಕ್ಷಿ ಸುದ್ದಿ, ಗದಗ: ಪರಮಪೂಜ್ಯ ಲಿಂ. ಪಂ. ಪಂಚಾಕ್ಷರಿ ಗವಾಯಿಗಳವರ 81ನೇ ಹಾಗೂ ಪದ್ಮಭೂಷಣ ಲಿಂ.ಡಾ. ಪಂ. ಪುಟ್ಟರಾಜ ಕವಿ ಗವಾಯಿಗಳವರ 15ನೇ ಪುಣ್ಯಸ್ಮರಣೋತ್ಸವ ಹಾಗೂ ಉಭಯ ಗುರುಗಳ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಸಂಜೆ ಧರ್ಮಸಭೆ ಹಾಗೂ ಕೀರ್ತನ ಸಮ್ಮೇಳನ ಜರುಗಿತು.
ಕಾಶಿ ಪೀಠದ ಪೂಜ್ಯಶ್ರೀ ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದಗಳವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸೂಡಿ ಜುಕ್ತಿಹಿರೇಮಠದ ಪೂಜ್ಯಶ್ರೀ ಕೊಟ್ಟೂರು ಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು. ಚಳಗೇರಿ ಹಿರೇಮಠದ ಪೂಜ್ಯಶ್ರೀ ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ನೇತೃತ್ವ ವಹಿಸಿದ್ದರು.
ಎಮ್ಮಿಗನೂರ ಶ್ರೀ ಹಂಪಿ ಸಾವಿರ ದೇವರು ಮಹಾಮಹಂತರ ಸಂಸ್ಥಾನ ಗುರುಮಠದ ಪೂಜ್ಯಶ್ರೀ ವಾಮದೇವ ಮಹಾಂತ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಹೆಬ್ಬಾಳ ಸಂಸ್ಥಾನ ಬೃಹನ್ಮಠದ ಪೂಜ್ಯಶ್ರೀ ನಾಗಭೂಷಣ ಶಿವಯೋಗಿ ಶಿವಾಚಾರ್ಯ ಮಹಾಸ್ವಾಮಿಗಳು, ಸುಳ್ಳ-ಹೂಲಿ ಪಂಚಗೃಹಮಠದ ಪೂಜ್ಯಶ್ರೀ ಶಿವಸಿದ್ದರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಅಡ್ನೂರ-ರಾಜೂರ ಬ್ರಹನ್ಮಠದ ಪೂಜ್ಯಶ್ರೀ ಪಂಚಾಕ್ಷರ ಶಿವಾಚಾರ್ಯ ಮಹಾಸ್ವಾಮಿಗಳು, ನೆಗಳೂರು ಸಂಸ್ಥಾನ ಹಿರೇಮಠದ ಪೂಜ್ಯಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಹುಬ್ಬಳ್ಳಿಯ ಆಯುರ್ವೇದಿಕ್ ಮಹಾಮನೆಯ ವೈದ್ಯಶ್ರೀ ಚೆನ್ನಬಸವಣ್ಣ ಗುರೂಜಿ, ಲಿಂಗಸೂರ ಮಾಣಿಕೇಶ್ವರಿ ಆಶ್ರಮದ ಪೂಜ್ಯಶ್ರೀ ಶಿವಶರಣೆ ನಂದೀಶ್ವರಿ ಅಮ್ಮನವರು, ಗದುಗಿನ ಅಡವೀಂದ್ರಸ್ವಾಮಿ ಮಠದ ಧರ್ಮದರ್ಶಿಗಳಾದ ಮಹೇಶ್ವರ ಸ್ವಾಮೀಜಿ ಹೊಸಳ್ಳಿಮಠ, ಬಸವನ ಬಾಗೇವಾಡಿಯ ಪೂಜ್ಯಶ್ರೀ ಶಿವಪ್ರಕಾಶ ಸ್ವಾಮಿಗಳು, ವೀರೇಶ್ವರ ಪುಣ್ಯಾಶ್ರಮದ ಪೀಠಾಧೀಪತಿ ಪೂಜ್ಯಶ್ರೀ ಡಾ. ಕಲ್ಲಯ್ಯಜ್ಜನವರು ಸಮ್ಮುಖ ವಹಿಸಿದ್ದರು.